LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಂಗಳೂರು : ಪಿಕಪ್, ಕಾರು ನಡುವೆ ಅಪಘಾತ - ಸಿಂಧನೂರು ಶಾಸಕರ ಸೋದರಳಿಯ ಸಾವು

ಬೆಂಗಳೂರು: ಅಶೋಕನಗರದ ಗರುಡ ಮಾಲ್ ಹತ್ತಿರ ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲೈವ್ ಬ್ಯಾಂಡ್ ಪ್ರದರ್ಶನವನ್ನು ನೋಡಿ ಹೊರಬಂದ ನಂತರ, ಶೇಖ್ ಹೈದರ್ ಅಲಿ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಆರೋಪಿಗಳು ಬೈಕ್ ಅನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದ ಹೈದರ್ ಅಲಿಯನ್ನು ಪೊಲೀಸರು ತಕ್ಷಣ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿಯೇ ಅವರು ಸಾವನ್ನಪ್ಪಿದರು. ಘಟನೆ ಬಳಿಕ, ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನರು ಜಮಾಯಿಸಿದ್ದರು. ಮತ್ತು ಅವರು ಆಕ್ರೋಶ ವ್ಯಕ್ತಪಡಿಸಿ ಲಾಂಗು-ಮಚ್ಚು ಝಳಪಿಸಿ ಆಸ್ಪತ್ರೆ ಗೇಟ್ ಮುಚ್ಚಲು ಪ್ರಯತ್ನಿಸಿದರು. ಆದಾಗ್ಯೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಈ ದಾಳಿಯಲ್ಲಿ ಹೈದರ್ ಅಲಿಯೊಂದಿಗೆ ಇದ್ದ ಅವರ ಸ್ನೇಹಿತನು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರ್ ಅಲಿ, ಶಾಸಕ ಎನ್.ಎ.ಹ್ಯಾರಿಸ್ ಅವರೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಅವರು ಹ್ಯಾರಿಸ್ ಪರ ಪ್ರಚಾರದಲ್ಲಿ ಕೂಡ ಭಾಗವಹಿಸಿದ್ದರು. ಪ್ರಕರಣ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಮತ್ತು ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಡಿಸಿಪಿ ಶೇಖರ್ ಮಾಹಿತಿ ನೀಡಿದಂತೆ, ಈ ಪ್ರಕರಣದಲ್ಲಿ ಹೈದರ್ ಅಲಿ ವಿರುದ್ಧ 11 ಪ್ರಕರಣಗಳಿವೆ ಅವುಗಳಲ್ಲಿ ಮಾರಣಾಂತಿಕ ಹಲ್ಲೆ, ಹಲ್ಲೆ ಮತ್ತು ಎನ್ಡಿಪಿಎಸ್ ಕೇಸ್‌ಗಳೂ ಸೇರಿವೆ. ಹೈದರ್ ಅಲಿ ಅಶೋಕನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಹತ್ಯೆಗೆ ಹಳೆಯ ವೈಶಮ್ಯ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ- ಸಂಪುಟ ಒಪ್ಪಿಗೆನೀವು ಮೆಟ್ರೋ ದಲ್ಲಿ ಓಡಾಡುವವರೆ, ? ಮುಂದಿನ ತಿಂಗಳಿಂದ ಮೆಟ್ರೋ ದರ ರೇಟ್.!ಸಣ್ಣಪುಟ್ಟ ಮನಸ್ತಾಪಗಳಿಂದ ಮೂರನೇ ವ್ಯಕ್ತಿ ಹಸ್ತಕ್ಷೇಪದಿಂದ ಭಿನ್ನಾಭಿಪ್ರಾಯದಿಂದ ನಿಮ್ಮಿಂದ ದೂರಾದಂತ ವ್ಯಕ್ತಿಗಳನ್ನು ಈ ರೀತಿಯಾಗಿ ನಿಮ್ಮ ಹತ್ತಿರ ಸೆಳೆಯಬಹುದು!ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ2 ನೇ ರ‍್ಯಾಂಕ್ ಪಡೆದ ಅನಿಮೇಶ್ ಪ್ರಧಾನ್ ಸ್ಪೂರ್ತಿದಾಯಕ ಕಥೆಈ ಕಾರಣಕ್ಕೆ ಹಿರಿಯ ಐಎಎಸ್ ಪಂಕಜ್ ಕುಮಾರ್ ಪಾಂಡೆಯವರಿಗೆ ನೋಟಿಸ್.!ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ  ಸ್ತಬ್ಧಚಿತ್ರ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ .!ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 23-01-2026 .!ಇಂದಿನ ವಚನ: -ಹಾವಿನಹಾಳ ಕಲ್ಲಯ್ಯ ಅವರ ವಚನ..!