LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಚ್ಛೇದನಕ್ಕಾಗಿ ನ್ಯಾಯಾಲಯ ಮೆಟ್ಟಿಲೇರಿದ ಜೋಡಿಗಳಿಗೆ ಮರು ಮದುವೆಯ ಭಾಗ್ಯ

ಉಡುಪಿ : ಸಣ್ಣ ಪುಟ್ಟ ಭಿನ್ನಾಬಿಪ್ರಾಯದಿಂದ ವಿಚ್ಚೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಮದುವೆಯಾಗಿ ಹೊಂದಾಣಿಕೆಯ ಬಾಳು ಬದುಕಬೇಕಾದ ಅನೇಕರು ಈ ರೀತಿ ವಿಚ್ಛೇದನಕ್ಕಾಗಿ ನ್ಯಾಯಾಲಯ ಅಲೆದಾಡುತ್ತಿದ್ದಾರೆ. ಈ ರೀತಿ ಉಡುಪಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದ ಮೂರು ಜೋಡಿಯನ್ನು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಮತ್ತೆ ಒಂದು ಮಾಡಲಾಗಿದೆ. ಇದೊಂದು ಅಪರೂಪದ ಕ್ಷಣವಾಗಿದ್ದು, ನ್ಯಾಯಾದೀಶರುಗಳು ಈ ಜೋಡಿಗಳ ಮನ ಒಲಿಸಿ ಮತ್ತೆ ಒಂದಾಗಿ ಬಾಳುವಂತೆ ಮಾಡಿದ್ದಾರೆ.

ಉಡುಪಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ , ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಅವರ ನೇತೃತ್ವದಲ್ಲಿ ಜೋಡಿಗಳು ಮತ್ತೆ ಒಂದಾಗಿದ್ದಾರೆ. ಒಂದು ಜೋಡಿ 2011 ರಲ್ಲಿ ಬೇರೆಯಾಗಿದ್ದರೆ, ಮತ್ತೊಂದು ಜೋಡಿ 2019 ರಲ್ಲಿ ಹಾಗೂ ಇನ್ನೊಂದು ಜೋಡಿ 2021 ರಲ್ಲಿ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಮೂರು ಜೋಡಿಗಳ ಮನವೊಲಿಸಿ ಜೀವನದ ಪಾಠ ಮಾಡುವ ಮೂಲಕ ನ್ಯಾಯಾಧೀಶರು ಮತ್ತೆ ಒಂದಾಗುವಂತೆ ಮನ ಒಲಿಸಿದ್ದಾರೆ. ಸುಖ ಜೀವನಕ್ಕೆ ಹೇಗೆ ಹೊಂದಿಕೊಂಡು ಬದುಕಬೇಕು , ಸಣ್ಣ ಪುಟ್ಟ ವಿಚಾರಗಳನ್ನು ಹೇಗೆ ತಮ್ಮಲ್ಲಿ ಬಗೆ ಹರಿಸಿಕೊಳ್ಳಬೇಕು ಎಂಬ ಸಲಹೆಯನ್ನು ಜೋಡಿಗಳಿಗೆ ನೀಡಲಾಗಿತ್ತು. ಸಲಹೆಯನ್ನು ಒಪ್ಪಿಕೊಂಡು ಮತ್ತೆ ಒಂದಾಗಲು ಒಪ್ಪಿದ ಜೋಡಿಗಳಿಗೆ ನ್ಯಾಯಾಲಯದಲ್ಲೇ ಮರು ಮದುವೆ ಕೂಡಾ ಮಾಡಿಸಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷ ಉಚಿತಶರ್ಟಿನ ಬಟನ್ ಸರಿಯಾಗಿ ಹಾಕಿಲ್ಲ ಎಂದು ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ;10 ಮಂದಿ ವಿರುದ್ಧ ಕೇಸುಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನ