Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಸ್ರುಲ್ಲಾಗಂಜ್ ಪಟ್ಟಣದ ಹೆಸರನ್ನು ಭೈರುಂಡಾ ಎಂದು ಬದಲಾಯಿಸಿದ ಸರ್ಕಾರ

 

ಭೋಪಾಲ್ :
ಭಾರತದಲ್ಲಿ ಪಟ್ಟಣ, ನಗರ ಸೇರಿದಂತೆ ಪ್ರಮುಖ ಸ್ಥಳಗಳ ಹೆಸರು ಬದಲಾಯಿಸುವ ಪ್ರಕ್ರಿಯೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಭಾರಿ ಪರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಯುಪಿ ಈ ವಿಚಾರದಲ್ಲಿ ತಣ್ಣಾಗಾಗಿದೆ. ಆದರೆ ಮಧ್ಯಪ್ರದೇಶ ಸರ್ಕಾರ ಕಳೆದೆರಡು ವರ್ಷದಿಂದ ಕೆಲ ಪಟ್ಟಣಗಳ ಹೆಸರು ಬದಲಾಯಿಸಿದೆ. ಇಂದು ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚವ್ಹಾಣ್ ಎರಡು ಪಟ್ಟಣದ ಹೆಸರನ್ನು ಮರುನಾಮಕರಣಗೊಳಿಸಿದ್ದಾರೆ. ನಸರುಲ್ಲಾಗಂಜ್ ಪಟ್ಟಣವನ್ನು ಬೈರುಂಡಾ ಎಂದು ಮರುನಾಮಕರಣ ಮಾಡಲಾಗಿದೆ. ಇತ್ತ ಹಿಶಂಗಬಾದ್ ಪಟ್ಟಣವನ್ನು ನರ್ಮದಾಪುರ ಎಂದು ಮರುನಾಮಕರಣ ಮಾಡಲಾಗಿದೆ.

ಕಳೆದ ವರ್ಷದ ಮಧ್ಯ ಪ್ರದೇಶ ಸರ್ಕಾರ ಎರಡು ಪಟ್ಟಣದ ಹೆಸರು ಬದಲಿಸಲು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದಿತ್ತು. ಇಂದು ಮಧ್ಯಪ್ರದೇಶ ಸರ್ಕಾರ ನೋಟಿಫಿಕೇಶನ್ ಹೊರಡಿಸಲಾಗಿದೆ. ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದೆ.

 

 

ಫೆಬ್ರವರಿ ತಿಂಗಳಲ್ಲಿ ಮಧ್ಯಪ್ರದೇಶ ಸರ್ಕಾರ ಭಾರಿ ವಿರೋಧದ ನಡುವೆ ಇಸ್ಲಾಂನಗರ ಗ್ರಾಮವನ್ನು ಜಗದೀಶಪುರ ಎಂದು ಬದಲಾಯಿಸಿತ್ತು.ಭೋಪಾಲ್ ನಗರದಿಂದ 12 ಕಿಲೋಮೀಟರ್ ದೂರದಲ್ಲಿದ್ದ ಈ ಗ್ರಾಮ 308 ವರ್ಷಗಳ ಹಿಂದೆ ಇಸ್ಲಾಂ ದಾಳಿಗೆ ಒಳಪಟ್ಟಿತ್ತು. ಹೀಗಾಗಿ ದಾಳಿ ಬಳಿಕ ಜಗದೀಶಪುರ ಎಂಬ ಹೆಸರನ್ನು ಬದಲಾಯಿಸಿ ಇಸ್ಲಾಂ ನಗರ ಎಂದು ಹೆಸರಿಡಲಾಗಿತ್ತು.

ನಗರ ಪಟ್ಟಣಗಳ ಹೆಸರು ಬದಲಾಯಿಸುವ ಕುರಿತು ಸುಪ್ರೀಂ ಕೋರ್ಟ್ ಈಗಾಗಲೇ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಕುರಿತು ದಾಖಲಾಗಿದ್ದ ಅರ್ಜಿ ವಜಾ ಮಾಡಿ ಸೂಚನೆ ನೀಡಿತ್ತು.

ನಗರಗಳ ಹೆಸರು ಬದಲಿಸಲು ಕೋರಿದ್ದ ಅರ್ಜಿ ವಜಾ ಆಕ್ರಮಣಕಾರರ ಹೆಸರು ಇರುವ ಊರುಗಳು ಹಾಗೂ ಐತಿಹಾಸಿಕ ಸ್ಥಳಗಳ ಹೆಸರನ್ನು ಬದಲಿಸಿ ಮರುನಾಮಕರಣ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಜಾ ವಜಾಗೊಳಿಸಿದೆ.

‘ಕ್ರೂರ ವಿದೇಶಿ ಆಕ್ರಮಣಕಾರರ’ ಹೆಸರಿನ ’ಪ್ರಾಚೀನ ಐತಿಹಾಸಿಕ ಸಾಂಸ್ಕೃತಿಕ ಧಾರ್ಮಿಕ ಸ್ಥಳ’ಗಳ’ ಮೂಲ ಹೆಸರುಗಳನ್ನು ಕಂಡುಹಿಡಿಯಲು ‘ಮರುನಾಮಕರಣ ಆಯೋಗ’ ರಚಿಸಲು ಆದೇಶಿಸಬೇಕು ಎಂದು ಬಿಜೆಪಿ ನಾಯಕ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ ಕೆ.ಎಂ.ಜೋಸೆಫ್‌ ಮತ್ತು ನ್ಯಾ ಬಿ.ವಿ.ನಾಗರತ್ನ ಅವರ ಪೀಠವು ಅರ್ಜಿದಾರರ ಮೇಲೆ ಕಿಡಿಕಾರಿ, ‘ಇಂಥ ವಿಷಯಗಳು ದೇಶ ಕುದಿಯುವಂತೆ ಮಾಡುತ್ತವೆ. ಸಮಸ್ಯೆಗಳನ್ನು ಜೀವಂತಗೊಳಿಸುತ್ತವೆ. ದೇಶದ ಇತಿಹಾಸವು ಅದರ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯನ್ನು ಕಾಡಬಾರದು’ ಎಂದು ಹೇಳಿತು. ‘ಹಿಂದೂ ಧರ್ಮವು ಒಂದು ಧರ್ಮವಲ್ಲ. ಆದರೆ ಒಂದು ಜೀವನ ವಿಧಾನವಾಗಿದೆ. ಹಿಂದೂ ಧರ್ಮದಲ್ಲಿ ಯಾವುದೇ ಮತಾಂಧತೆ ಇಲ್ಲ. ಕೇವಲ ಅಸೌಹಾರ್ದತೆ ಉಂಟುಮಾಡುವ ಹಿಂದಿನ ವಿಷಯಗಳನ್ನು ಕೆದಕಬೇಡಿ. ದೇಶವನ್ನು ಕುದಿಯಲು ಬಿಡಲಾಗದು’ ಎಂದಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ