LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಮ್ಮ ಗಣತಿಯನ್ನು ವಿರೋಧಿಸಿಲ್ಲ; ಕ್ರಮಬದ್ಧವಾಗಿಲ್ಲ ಎಂದಷ್ಟೇ ಜೆಡಿಎಸ್ ವಿರೋಧಿಸಿದೆ

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಜಾತಿ ಗಣತಿ ವಿಷಯದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷವು; ನರೇಂದ್ರ ಮೋದಿ ಅವರ ನಿರ್ಣಯದ ಜಾತಿ ಗಣತಿಯನ್ನು ಜೆಡಿಎಸ್ ಸ್ವಾಗತಿಸಿದೆ. ಆದರೆ, ನಿಮ್ಮ ಜಾತಿಗಣತಿಯನ್ನು ಜೆಡಿಎಸ್ ವಿರೋಧಿಸಿಲ್ಲ, ನೆನಪಿರಲಿ. ನಿಮ್ಮ ಗಣತಿ ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ವಿರೋಧಿಸಿದೆ ಎಂದು ಸಿಎಂಗೆ ಟಾಂಗ್ ನೀಡಿದೆ.

ದೇವೇಗೌಡರ ಗರಡಿಯಲ್ಲೇ ಬೆಳೆದು ರಾಜಕೀಯ ಬದುಕು ಕಟ್ಟಿಕೊಂಡ ಸಿದ್ದರಾಮಯ್ಯನವರು ಇಬ್ಬಗೆಯ ನೀತಿ ಬಗ್ಗೆ ಆಣಿಮುತ್ತು ಉದುರಿಸಿದ್ದಾರೆ! ಆಣಿಮುತ್ತು ಉದುರಿಸುವ ಭರದಲ್ಲಿ ತಾವೇನು? ತಮ್ಮ ನಿಜಬಣ್ಣವೇನು ಎಂಬುದನ್ನು ಮತ್ತೊಮ್ಮೆ ಲೋಕಾರ್ಪಿತ ಮಾಡಿದ್ದಾರೆ! ಸಿದ್ದರಾಮಯ್ಯನವರು ಎಂದರೆ ಹಾಗೆಯೇ.. ದೇಹವೊಂದು, ನಾಲಿಗೆ ಎರಡು!! ಎಂದು ಜೆಡಿಎಸ್ ಕುಟುಕಿದೆ.

ದೇವೇಗೌಡರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಬಗ್ಗೆ ಸಿದ್ದರಾಮಯ್ಯನವರು ಸಹಜ, ಸಕಾರಾತ್ಮಕ ಟೀಕೆ ಮಾಡಲಿ. ಬೇಡ ಎಂದವರು ಯಾರು? ಆದರೆ, ಅದೇ ನಿತ್ಯಕೃಷಿ ಎಂಬಂತೆ ನಿರಂತರವಾಗಿ ರಾಜಕೀಯ ಜನ್ಮಕೊಟ್ಟ ಮೇರು ನಾಯಕನ ಬಗ್ಗೆಯೇ ವಿಷಕಾರುವುದು ಎಷ್ಟು ಸರಿ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಇಂದಿರಾ ಗಾಂಧಿ ಬಗ್ಗೆ ಸಿದ್ದರಾಮಯ್ಯ ಉದುರಿಸಿದ್ದ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ಸಿಗೆ ಸಾಧ್ಯವಿದೆಯಾ?

ಸಿದ್ದರಾಮಯ್ಯನವರು ಜನತಾ ಪರಿವಾರದಲ್ಲಿದ್ದಾಗ ಇಂದಿರಾ ಗಾಂಧಿ ಅವರ ಬಗ್ಗೆ ಉದುರಿಸಿದ್ದ ಭಾರೀ ಭಾರೀ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಂದ ಸಾಧ್ಯವಿದೆಯಾ? ಇಂದಿರಾ ಗಾಂಧಿ ಅವರು ನಮ್ಮ ನಡುವೆ ಇಲ್ಲ. ಹೀಗಾಗಿ ಅವರ ಬಗ್ಗೆ ಸಿದ್ದರಾಮಯ್ಯನವರು ಉದುರಿಸಿದ್ದ ಆಣಿಮುತ್ತುಗಳನ್ನು ಉಲ್ಲೇಖಿಸುವುದು ಅಪ್ರಸ್ತುತ ಎಂದು ಜೆಡಿಎಸ್ ಹೇಳಿದೆ.

ಕೊನೆಪಕ್ಷ, ಹುದ್ದೆಯ ಶಿಷ್ಟಾಚಾರಕ್ಕಾದರೂ ಕಟ್ಟುಬಿದ್ದು ಸಿಎಂ ಅವರು ತಮ್ಮ ನಾಲಿಗೆಗೆ ಆಚಾರ ಕಲಿಸಿಕೊಳ್ಳದಿದ್ದರೆ ಅವರು ಹಿಂದೆ ಉದುರಿಸಿದ್ದ ಎಲ್ಲಾ ಆಣಿಮುತ್ತುಗಳನ್ನು ಹೆಕ್ಕಿಹೆಕ್ಕಿ ಇಡಲಾಗುವುದು ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

ಜೆಡಿಎಸ್ ಪಕ್ಷವು ಮುಂದಿನ ಜನಗಣತಿಯಲ್ಲಿಯೇ ಜಾತಿ ಗಣತಿ ನಡೆಸುವ ಮೋದಿ ಅವರ ನಿರ್ಣಯವನ್ನು ಜೆಡಿಎಸ್ ಸ್ವಾಗತಿಸಿದೆ. ಹಾಗೆಂದು, ಸಿದ್ದರಾಮಯ್ಯನವರೇ.., ನಿಮ್ಮ ಜಾತಿಗಣತಿಯನ್ನು ಜೆಡಿಎಸ್ ವಿರೋಧಿಸಿಲ್ಲ, ನೆನಪಿರಲಿ. ಆದರೆ; ನಿಮ್ಮ ಗಣತಿ ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ವಿರೋಧಿಸಿದೆ. ಅದು ಸುಳ್ಳು ಅಂಕಿ-ಅಂಶಗಳ ಕಾಗಕ್ಕಗುಬ್ಬಕ್ಕನ ಕಥೆ ಎಂಬುದನ್ನು ಜನರಿಗೆ ತಿಳಿಸಿದೆ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ.

ನಿಮ್ಮ ಗಣತಿಗಾರುಡಿ ಎಲ್ಲರಂತೆ ನಮಗೂ ಅರ್ಥವಾಗಿದೆ. ನಿಮ್ಮದೇ ಪಕ್ಷದ ಶಾಸಕರು, ಸಚಿವರು ನಿಮ್ಮ ಗಣತಿಯ ಬಾಲ-ಬುಡ ಹಿಡಿದು ಬೀದಿಬೀದಿಯಲ್ಲಿ ಅಲ್ಲಾಡಿಸುತ್ತಿದ್ದಾರೆ. ನಿಮ್ಮ ಸರಕಾರದ ಬುಡವನ್ನೂ ಸಹ.. ಏನಂತೀರಿ..? ಎಂದು ಪ್ರಶ್ನೆ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ