LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧ್ವನಿಮುದ್ರಣಕ್ಕೆ ಹೊರಟ ‘ಸುಮಾ’ ಚಲನಚಿತ್ರ

ಬೆಂಗಳೂರ : ಓಂ ಸಾಯಿ ಸಿನಿಮಾಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ‘ಸುಮಾ’ ಸಿನಿಮಾದ ಚಿತ್ರೀಕರಣ ಸಂಪೂರ್ಣ ಮುಕ್ತಾಯಗೊಂಡು ಧ್ವನಿಮುದ್ರಣ ಕಾರ್ಯದಲ್ಲಿ ತೊಡಗಿದೆ.
‘ಸುಮಾ’ ಚಿತ್ರದ ಚಿತ್ರೀಕರಣ ಮಂಡ್ಯ ಜಿಲ್ಲೆಯ ಕೆ ಎಂ ದೊಡ್ಡಿ (ಭಾರತೀನಗರ), ಆಲಭುಜನಹಳ್ಳಿ, ನಗರಕೆರೆ ಮತ್ತು ಮಾಲಗಾರನಹಳ್ಳಿಯ ಸುತ್ತಮುತ್ತ ಒಟ್ಟು 20 ದಿನಗಳ ಕಾಲ ಚಿತ್ರೀಕರಣ ಮಾಡಿದ್ದು ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಊಟಿಗೆ ತೆರಳಿತ್ತು. ಈ ಹಿಂದೆ ಕನ್ನಡದಲ್ಲಿ ‘ಶ್ರೀಕಬ್ಬಾಳಮ್ಮನ ಮಹಿಮೆ’, ‘ಮನೆ’, ‘ಬ್ಯಾಂಕ್ ಲೋನ್’, ‘ಸುಳಿ’ ಸೇರಿದಂತೆ ನಾಲ್ಕು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ರಶ್ಮಿ ಎಸ್. ‘ಸುಮಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದು ವೆÄÊಸೂರು ಮೂಲದ ಪ್ರದೀಪ್ ಗೌಡ ನಾಯಕನಾಗಿ, ನಾಯಕಿಯಾಗಿ ಮೊದಲ ಬಾರಿಗೆ ಮಾನ್ಯತಾ ನಾಯ್ಡು, ಉಳಿದಂತೆ ಬಾಲ ರಾಜವಾಡಿ, ಜೋ ಸೈಮನ್, ಮುರಳೀಧರ್ ಡಿ. ಆರ್, ಕಾವ್ಯ ಪ್ರಕಾಶ್, ಪವಿತ್ರ, ವಿಜಯಲಕ್ಷ್ಮೀ, ಅವಿನಾಶ ಗಂಜಿಹಾಳ, ಶಿವಕುಮಾರ್ ಆರಾಧ್ಯ , ಹರಿಹರನ್ ಬಿ. ಪಿ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿ ಖ್ಯಾತಿಯ ಭೈರವಿ,ಮಂಜುಳಾ ಅತಿಥಿ ಪಾತ್ರದಲ್ಲಿ ಡಾ ವಿ ನಾಗೇಂದ್ರ ಪ್ರಸಾದ್ , ವೈದ್ಯೆಯಾದ ಡಾ ಶ್ವೇತ (ಗೈನಾಕಲಜಿಸ್ಟ್) ಅಭಿನಯಿಸಿದ್ದಾರೆ.


‘ಸುಮಾ’ ಸಿನಿಮಾಕ್ಕೆ ದೇವೂ, ವಿನಾಯಕ್ ರೇವಡಿ ಬಾಗಲಕೋಟೆ, ಮತ್ತು ಗಗನ್ ಆರ್ ಇವರ ಛಾಯಾಗ್ರಹಣ, ಮುತ್ತುರಾಜ್ ಟಿ. ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ವೇದಾಂತ್ ಅತಿಶಯ್ ಜೈನ್ ಸಂಗೀತವಿದ್ದು, ಸತೀಶ್ ಜೋಶಿ ಹಾವೇರಿ ಮತ್ತು ಪ್ರದೀಪ್ ಗೌಡ ರವರ ಸಾಹಿತ್ಯವಿದೆ. ಮೇಘನ ಹಳಿಯಾಳ ಮತ್ತಿತರರು ಹಾಡುಗಳಿಗೆ ಧ್ವನಿನೀಡಿದ್ದು, ಪತ್ರಿಕಾಸಂಪರ್ಕ ಕಾರ್ತಿಕ್ ಸುಧನ್, ಡಾ.ಪ್ರಭು ಗಂಜಿಹಾಳ,ಡಾ.ವೀರೇಶ ಹಂಡಿಗಿ ಅವರದಿದೆ.ಸಿನಿಮಾಕ್ಕೆ ರಂಗಸ್ವಾಮಿ ಟಿ (ರವಿ) ಸಹ ನಿರ್ಮಾಪಕರಾಗಿದ್ದಾರೆ. ಚಿತ್ರತಂಡದ ಯೋಜನೆಯಂತೆ, ಇದೇ ಆಗಸ್ಟ್ ವೇಳೆಗೆ ‘ಸುಮಾ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿ, ಅಕ್ಟೋಬರ್ ನಲ್ಲಿ ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
-ವರದಿ
ಡಾ.ಪ್ರಭು ಗಂಜಿಹಾಳ
ಮೊ:9448775346
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು