LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಅಧಿಕೃತ ಘೋಷಣೆ ಬಾಕಿ

ಬಳ್ಳಾರಿ, ನವೆಂಬರ್ 23: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣಾ ಕಣದಲ್ಲಿ 6 ಅಭ್ಯರ್ಥಿಗಳಿದ್ದು ಸದ್ಯದ ಮಾಹಿತಿಯಂತೆ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಬಂಗಾರ ಹನುಮಂತ ಮತ್ತು ಕಾಂಗ್ರೆಸ್‌ನ ಇ. ಅನ್ನಪೂರ್ಣ. ಸಂಡೂರು ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

ಶನಿವಾರ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಮಯ 10.17ರ ಮಾಹಿತಿಯಂತೆ ಕಾಂಗ್ರೆಸ್‌ನ ಇ. ಅನ್ನಪೂರ್ಣ 38,373 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಬಂಗಾರ ಹನುಮಂತ 38,340 ಮತಗಳನ್ನು ಪಡೆದ್ದಾರೆ.

ಸಂಡೂರು ಕ್ಷೇತ್ರದಲ್ಲಿ ನವೆಂಬರ್ 13ರಂದು 253 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಶೇ 76.24 ರಷ್ಟು ಮತದಾನವಾಗಿತ್ತು. ಅಂಚೆ ಮತಗಳ ಎಣಿಕೆಯಿಂದಲೂ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದರು.

ಇಗಾಗಲೆ 17ನೇ ಸುತ್ತಿನ ಮತ ಏಣಿಕೆ ಮುಕ್ತಾಯ ಗೋಂಡಿದ್ದು
ಕಾಂಗ್ರೇಸ್ ಮುನ್ನಡೆ ಕಾಯ್ದುಕೋಂಡು ಬಂದಿದೆ
ಇ. ತುಕಾರಾಂ ಸಂಡೂರು ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕರ ಬಳಿ ಉಪ ಚುನಾವಣೆಗೆ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಅವರು ಸಫಲವಾಗಿದ್ದಾರೆ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಅವರೇ ತೆಗೆದುಕೊಂಡಿದ್ದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸಿ ಪ್ರಚಾರವನ್ನು ನಡೆಸಿದ್ದಾರೆ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಸಂಡೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದ್ದರಿಂದ ಸಂಡೂರು ಕದನ ಕುತೂಹಲಕ್ಕೆ ಕಾರಣವಾಗಿದೆ. ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, 6 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿಯ ಬಂಗಾರ ಹನುಮಂತ ಪರವಾಗಿ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯುತ್ತಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.

16ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8881 ಮತಗಳ ಮುನ್ನಡೆ   ಕಾಂಗ್ರೇಸ್- 83368   ಬಿಜೆಪಿ- 74487

ಸಂಡೂರು ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತಗಳು? * ಕಾಂಗ್ರೆಸ್‌ನ ಇ. ಅನ್ನಪೂರ್ಣ - 50692 * ಬಿಜೆಪಿಯ ಬಂಗಾರ ಹನುಮಂತ - 47204 * ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ - 298 * ಪಕ್ಷೇತರ ಎನ್. ವೆಂಕಣ್ಣ - 219 * ಪಕ್ಷೇತರ ಟಿ. ಎರ್ರಿಸ್ವಾಮಿ - 117 * ಪ್ಷೇತರ ಟಿ. ಎಂ. ಮಾರುತಿ - 106 ಮತಗಳು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು