
ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸತಕ್ಕದ್ದು.
ಪ್ರವೇಶದ ಸಮಯ: ಸಂಜೆ 6 ರಿಂದ 7.30ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ರಾಜಭವನದ ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ.
ಸಾರ್ವಜನಿಕರು ಭದ್ರತಾ ಸಿಬ್ಬಂದಿಗಳು ನೀಡುವ ಸೂಚನೆಗಳನ್ನು ಪಾಲಿಸಿ, ಸಹಕರಿಸಬೇಕಾಗಿ ಕೋರಿದೆ ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಪ್ರಕಟಣೆಲ್ಲಿ ತಿಳಿಸಿದ್ದಾರೆ.