LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪೋಷಕರ ಪಾತ್ರ ತುಂಬಾ ಅಗತ್ಯ

ಚಿತ್ರದುರ್ಗ

ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪೋಷಕರ ಪಾತ್ರ ತುಂಬಾ ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ಹೇಳಿದರು.

ನಗರದ ಜೆ.ಸಿ.ಆರ್ ಬಡಾವಣೆಯ ಜನಶಿಕ್ಷಣ ಸಂಸ್ಥೆಯ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹಗಳ ಸಂಖ್ಯೆ, ಬಾಲತಾಯಂದಿರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಹಿಡಿಯುವ ನಿಟ್ಟಿನಲ್ಲಿ ಕುಟುಂಬದಲ್ಲಿ ಪೋಷಕರ ಪಾತ್ರ ಬಹಳ ಪ್ರಮುಖವಾಗಿದೆ. ಮಕ್ಕಳ ಸುರಕ್ಷತೆಗಾಗಿ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ ಇವುಗಳ ವ್ಯತ್ಯಾಸ ತಿಳಿಸಿ ಹೇಳಿದರು.

ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಮಹಿಳಾ ಸಹಾಯವಾಣಿ ಸಂಖ್ಯೆ 181 ಈ ನಂಬರಿಗೆ ಕರೆ ಮಾಡುವಂತೆ ಹಾಗೂ ಕರೆ ಮಾಡಿದವರು ಹೆಸರು ಗೌಪ್ಯವಾಗಿ ಇರುತ್ತದೆ ಎಂದು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಜಿ.ಎಂ.ರೇಖಾ, ಸಂಸ್ಥೆ ಕಾರ್ಯಕ್ರಮ ಅಧಿಕಾರಿ ಭರತ್ ಹಾಗೂ ಸಹಾಯಕ ಕಾರ್ಯಕ್ರಮ ಅಧಿಕಾರಿ ಶೃತಿ ಮತ್ತು ಕಚೇರಿ ವ್ಯವಸ್ಥಾಪಕ ತಿಪ್ಪೇಶ್ ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು