LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವ ವೃಂದಾವನಕ್ಕೆ ಮೂರನೇ ವರ್ಷದ ಪಾದಯಾತ್ರೆ ಯಶಸ್ವಿ.

ಗಂಗಾವತಿ ನಗರದ ಹಿರೇಜಂತಕಲ್ ವಿರುಪಾಪುರ ಆರ್ಯವೈಶ್ಯ ಸಮಾಜ ಬಾಂಧವರಿಂದ ಪ್ರತಿ ವರ್ಷದಂತೆ ಈ ವರ್ಷದ ಮೂರನೇ  ಪಾದಯಾತ್ರೆಯನ್ನು  ಸಂಪೂರ್ಣವಾಗಿ ಯಶಸ್ವಿಯಾಗಿ ಜರಗಿತು. ಇದಕ್ಕೆ ಮಂತ್ರಾಲಯದ ಶ್ರೀ ಗುರು ಸಾರ್ವಭೌಮ ರಾಘವೇಂದ್ರ ಸ್ವಾಮಿಗಳವರ ಪ್ರೇರಣೆ ಹಾಗೂ ತಾಯಿ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ ಅನುಗ್ರಹ ಕಾರಣವಾಗಿದೆ ಎಂದು ಆರ್ಯವೈಶ್ಯ ಸಮಾಜದ ಅಧ್ಯಕ್ಷ ಹಾಗೂ ಪಾದಯಾತ್ರೆಯ ಆಯೋಜಕ ದರೋಜಿ ನಾಗರಾಜ ಶ್ರೇಷ್ಟಿ  ಹೇಳಿದರು. ಅವರು ಗುರುವಾರ ಮೂರನೆಯ ವರ್ಷದ ಪಾದಯಾತ್ರೆಯನ್ನು ಆನೆಗುಂದಿಯ ತುಂಗಭದ್ರ ತಟದಲ್ಲಿರುವ ನವ ವೃಂದಾವನ ಕ್ಷೇತ್ರಕ್ಕೆ ತೆರಳಿ ವಿಶೇಷ ಪೂಜೆ ನಡೆಸಿ ಬಳಿಕ ಮಾತನಾಡಿದರು. ನವ ವೃಂದಾವನ ಕ್ಷೇತ್ರ ಒಂಬತ್ತು ಯತಿವರ್ಯರ ಪುಣ್ಯ ಹಾಗೂ ಶಕ್ತಿ ಕ್ಷೇತ್ರ ವಾಗಿದ್ದು ದೇಶ ವಿದೇಶದಿಂದ ಭಕ್ತಾದಿಗಳನ್ನು ಸೆಳೆಯುವ ಪವಿತ್ರ ತಾಣವಾಗಿದೆ ಎಂದು ತಿಳಿಸಿದರು. ಪಾದಯಾತ್ರೆಗೆ ಸಂಬಂಧಿಸಿದಂತೆ 150 ಕ್ಕೂ ಹೆಚ್ಚು ಸಮಾಜ ಬಾಂಧವರು ಮಹಿಳಾ ಮಂಡಳಿಯ ಸದಸ್ಯರು ಹಾಗೂ ಯುವಕ ಸಂಘದವರು ತುಂಬು ಹೃದಯದ ಸಹಕಾರವನ್ನು ನೀಡುತ್ತಾ ಬರಲಾಗಿದ್ದು ಧಾರ್ಮಿಕತೆ ಮನೋಭಾವನೆ ಜೊತೆ ಉತ್ತಮ ಸಂಸ್ಕಾರ ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು. ಇದಕ್ಕೂ ಮುಂಚೆ ನವ ವೃಂದಾವನ ಯತಿವರ್ಯರಿಗೆ  ನರಸಿಂಹ ಆಚಾರ್. ವಿಜಯೇಂದ್ರ ಆಚಾರ್. ಆನಂದ ಆಚಾರ್. ಇವರ ನೇತೃತ್ವದಲ್ಲಿ ನವ ವೃಂದಾವನ ಒಂಬತ್ತು ಯತಿವರ್ಯರಿಗೆ   ಮಹಾಪಂಚಾಮೃತ ಅಭಿಷೇಕ್ ನೆರವೇರಿಸಲಾಯಿತು.ಅಷ್ಟೋತ್ತರ ಪಾರಾಯಣ ಭಜನೆ ಸ್ಥಳದ ಮಹಿಮೆಯ ಕುರಿತು ಅರ್ಚಕರಿಂದ ಉಪನ್ಯಾಸ ಹಾಗೂ ಗುರು ಭೀಮ್ ಭಟ್ಜ ಜೋಶಿ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬಳಿಕ ಮಹಾಮಂಗಳಾರತಿ ತೀರ್ಥ ಪ್ರಸಾದ ನಡೆಸಲಾಯಿತು ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ. ಎನ್ ಗಂಗಾಧರ. ಜಿ ಆರ್ ಎಸ್ ಸತ್ಯನಾರಾಯಣ. ಹಣವಾಳ ಚಂದ್ರಶೇಖರ. ಲಿಂಗಪ್ಪ ಜನಾದ್ರಿ .ಆನೆಗೊಂದಿ ಗೋಪಾಲ ಶ್ರೇಷ್ಟಿ. ದಮ್ಮೂರು  ಸುರೇಶ. ದಮ್ಮೂರ  ರಾಜಕುಮಾರ.  ದರೋಜಿ ವೆಂಕಟೇಶ.  ದರೋಜಿ ಮಲ್ಲಿಕಾರ್ಜುನ. ಈಶ್ವರ ಶ್ರೇಷ್ಟಿ.    ಹೊಸಳ್ಳಿ ಬಸವರಾಜ. ರಾಘವೇಂದ್ರ ಬನ್ನಿಗೋಳ .ಬದ್ರಿ ಆನೆಗುಂದಿ. ಸೌದ್ರಿ ನಾಗರಾಜ. ಜಗದೀಶ ಶ್ರೇಷ್ಟಿ.ಸೇರಿದಂತೆ ನವ ವೃಂದಾವನ ಭಜನಾ ಮಂಡಳಿಯ ಅಧ್ಯಕ್ಷರಾದ ದರೋಜಿ ನರಸಿಂಹ ಶ್ರೇಷ್ಟಿ.ಮತ್ತು ಭಜನಾ ಮಂಡಳಿಯ ಸದಸ್ಯರು ಹಾಗೂ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ  ದಮ್ಮೂರು ರುಕ್ಮಿಣಿ ಮತ್ತು ವಾಸವಿ ಮಹಿಳಾ ಭಜನಾ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಮಂಜುಳ ದಮ್ಮೂರು ಮಹಿಳಾ ಭಜನಾ ಮಂಡಳಿಯ ಸದಸ್ಯರು ಮತ್ತು ಗಂಗಾವತಿ ತಾಲ್ಲೂಕಿನ ಸುತ್ತಾಮುತ್ತಲ್ಲಿನ ಸಮಾಜ ಭಾಂದವರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು