LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೊಡ್ಡಪೇಟೆ ಕಾಟಲಿಂಗೇಶ್ವರಸ್ವಾಮಿ ದೇವರ ಮೂರುದಿನ ಗುಗ್ಗರಿ ಹಬ್ಬ

 

ಚಿತ್ರದುರ್ಗ : ನಗರದ ದೊಡ್ಡಪೇಟೆಯ ಕೆಂಚನಾರಹಟ್ಟಿಯಲ್ಲಿರುವ ಕಾಟಲಿಂಗೇಶ್ವರಸ್ವಾಮಿ ದೇವರುಗಳ ಕಾಳು ಹಬ್ಬ(ಗುಗ್ಗರಿ ಹಬ್ಬ) ಜಾತ್ರೆ ಫೆ.23 ರಿಂದ 25 ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ.

ಸೋಮವಾರ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ವಾದ್ಯಗಳೊಂದಿಗೆ ದೇವಸ್ಥಾನದಿಂದ ದೇವರುಗಳನ್ನು ಹೊರಡಿಸಿ ಹೊಸ ದ್ಯಾಮವ್ವನಹಳ್ಳಿ ಬಳಿಯಿರುವ ಮೂಲ ಸ್ಥಾನದ ಪೌಳಿಯಲ್ಲಿ ಚಿಲುಮೆ ತೆಗೆದು ಗಂಗಾಜಲದಿಂದ ದೇವರುಗಳನ್ನು ಶುದ್ದಿಗೊಳಿಸಿ ಅಭಿಷೇಕ ಮಾಡಲಾಗುವುದು. 24 ರ ರಾತ್ರಿ 8 ಗಂಟೆಗೆ ಕಾಟಲಿಂಗೇಶ್ವರ ದೇವಸ್ಥಾನದಲ್ಲಿ ಕಂಬಳಿ ಗದ್ದಿಗೆ ಹಾಸಿ ಕಾಳು ಬೇಯಿಸಿ ರಾಶಿ ಹಾಕಿ ಚಿಗಳಿ ತಂಬಿಟ್ಟು ಬಾಳೆಹಣ್ಣು ತೆಂಗಿನಕಾಯಿ ಎಲೆ ಅಡಿಕೆ ಗದ್ದಿಗೆ ಮೇಲಿಟ್ಟು ಪೂಜೆ ನಂತರ ಮಹಾ ಮಂಗಳಾರತಿ ಪ್ರಸಾದ ವಿತರಣೆಯಿರುತ್ತದೆ.

25 ರಂದು ಬೆಳಿಗ್ಗೆ 9 ಕ್ಕೆ ಕಾಟಲಿಂಗೇಶ್ವರ ದೇವಸ್ಥಾನದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯದಂತೆ ಸ್ವಾಮಿಗೆ ದೊಡ್ಡೆ ಎಡೆ ನೈವೇದ್ಯ ಅರ್ಪಿಸಿ ಗುಡಿಕಟ್ಟಿನ ಅಣ್ಣ ತಮ್ಮಂದಿರುಗಳಿಗೆ ದೊಡ್ಡ ಎಡೆ ಪ್ರಸಾದವನ್ನು ನೀಡಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನ ಸಮಿತಿಯ ವ್ಯವಸ್ಥಾಪಕ ಡಿ.ಮೈಲಾರಪ್ಪ ವಿನಂತಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026