LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಸ್ಐ ಸಾವು ಪ್ರಕರಣ: ತನಿಖೆ ನಂತರ ಸತ್ಯಾಂಶ ಬಯಲು

ಬೆಂಗಳೂರು (ಆಗಸ್ಟ್ 3):- ಯಾದಗಿರಿ ಪಿಎಸ್ಐ ಸಾವು ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇನೆ. ಆ ಆಯಾಮದಲ್ಲಿಯು ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ. ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ‌ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರು ಇದ್ದರು ಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರು ಸಹ ಎಫ್ಐಆರ್ ದಾಖಲಿಸುತ್ತಾರೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‌ನವರು ಪಾದಯಾತ್ರೆಯನ್ನು ಕಾನೂನು ಬಾಹಿರವಾಗಿ ಮಾಡುವುದಿಲ್ಲ. ಶಾಂತಿಯುತವಾಗಿ ನಡೆಸುವುದಾಗಿ ಕೇಳಿಕೊಂಡಿದ್ದರಿಂದ ಸಿಎಂ ಜೊತೆ ಚರ್ಚಿಸಿ ಅವಕಾಶ ನೀಡಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳಾಗಬಾರದು, ಜನರಿಗೆ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಕಂಡಿಷನ್ ಹಾಕಲಾಗಿದೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು