Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿಗೆ ವಂದೇ ಮಾತರಂ ರೈಲು ತರಲು ಸಿಡಿದೆದ್ದ ಕರವೇ....!!

 

ಬೆಳಗಾವಿ- ಕೇಂದ್ರ ಸರ್ಕಾರದ ಯೋಜನೆಗಳು ಕೇವಲ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಿಗೆ ಸೀಮೀತವಾಗುತ್ತಿದ್ದು,ಸ್ಥಳೀಯ ಜನಪ್ರತಿನಿಧಿಗಳು ಕೂಡಲೇ ವಂದೇ ಮಾತರಂ ರೈಲನ್ನು ದಾರವಾಡದಿಂದ ಬೆಳಗಾವಿ ವರೆಗೂ ಓಡಿಸಲು ಕ್ರಮ ಕೈಗೊಳ್ಳಬೇಕೆಂದು ಕರವೇ ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ.

ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಕಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋಜನೆಗಳ ಹಂಚಿಕೆಯಲ್ಲಿ ವಿಮಾನ,ಹಾಗು ರೈಲು ಸೇವೆಗಳ ವಿಚಾರದಲ್ಲಿ ಬೆಳಗಾವಿಗೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು ಇದಕ್ಕೆ ಬೆಳಗಾವಿ ಜಿಲ್ಲೆಯ ಇಬ್ಬರು ಸಂಸದರು ಹಾಗು ರಾಜ್ಯಸಭಾ ಸದಸ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕರವೇ ಆರೋಪಸಿದೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಅನೇಕ ವಿಮಾನ ಸೇವೆಗಳು ರದ್ದಾಗಿವೆ,ಈಗ ವಂದೇ ಮಾತರಂ ರೈಲು ಧಾರವಾಡ- ಹುಬ್ಬಳ್ಳಿ ನಗರಗಳ ಪಾಲಾಗಿದ್ದು ಸ್ಥಳೀಯ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಡಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವಿದ್ಯುತ್ ದರವನ್ನು ಹೆಚ್ಚಿಸಿ ರಾಜ್ಯದ ಬಡಜನರಿಗೆ ಮೋಸ ಮಾಡಿದೆ.ಅಂಗೈಯಲ್ಲಿ ಅರಮನೆ ತೋರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಬಡವರ್ಗದವರನ್ನು ಸುಲಿಗೆ ಮಾಡುತ್ತಿದೆ.ಸರ್ಕಾರ ನುಡಿದಂತೆ ನಡೆಯಬೇಕು, ವಿದ್ಯುತ್ ದರ ಹೆಚ್ಚಳದ ನಿರ್ಧಾರ ವಾಪಸ್ ಪಡೆದು ರಾಜ್ಯದ ಎಲ್ಲ ಬಡ ಕುಟುಂಬಳಿಗೆ ಕೊಟ್ಟ ಮಾತಿನಂತೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ವಚನ ನಿಭಾಯಿಸಬೇಕು ಎಂದು ದೀಪಕ ಗುಡಗನಟ್ಟಿ ಅವರು ಒತ್ತಾಯಿಸಿದ್ದಾರೆ.

ವಂದೇ ಮಾತರಂ ರೈಲು ಬೆಳಗಾವಿಗೆ ಬರಬೇಕು,ವಿದ್ಯುತ್ ದರ ಹೆಚ್ಚಳ ಮಾಡುವ ನಿರ್ಧಾರ ವಾಪಸ್ ಪಡೆಯಬೇಕು ಎಂದು ಬೆಳಗಾವಿ ಜಿಲ್ಲೆಯ ಕರವೇ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದ್ದಾರೆ.

ಕರವೇ ರಾಜ್ಯ ಸಂಚಾಲಕ,ಮಹಾದೇವ ತಳವಾರ,ಸುರೇಶ್ ಗವಣ್ಣವರ,ಹೊಳೆಪ್ಪಾ ಸುಲದಾಳ,ಬಾಳು ಜಡಗಿ,ಗಣೇಶ್ ರೋಕಡೆ,ರಮೇಶ್ ಯರಗಣ್ಣವರ,ದಶರಥ ಬನೋಶಿ,ಕೃಷ್ಣಾ ಪಾಟೀಲ ( ಕಿಟ್ಟು) ಸೇರದಂತೆ ಹಲವಾರು ಜನ ಕರವೇ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ