ವರ್ಗಾವಣೆಗೊಂಡ ಈ ಇಬ್ಬರು ಕೆಎಎಸ್ ಅಧಿಕಾರಿಗಳು.!
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಮಾಡಿದ್ದು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸ್ಥಳ ನಿರೀಕ್ಷಣೆಯಲ್ಲಿರುವ ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ
ಸುರೇಕಾ : ಕೆಎಎಸ್ (ಹಿ.ಶ್ರೇ) ಅಧಿಕಾರಿ- ಕುಲಸಚಿವರು (ಆಡಳಿತ) ಬೀದರ್ ವಿಶ್ವವಿದ್ಯಾಲಯ ಬೀದರ್-ಹುದ್ದೆಗೆ, ರಜನಿಕಾಂತ : ಕೆಎಎಸ್ (ಕಿ.ಶ್ರೇ) ಅಧಿಕಾರಿ- ಆಡಳಿತ ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು-ಹುದ್ದೆಗೆ ವರ್ಗಾವಣೆ ಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.