LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಡೆಗೂ ಗೂಗಲ್ ಮ್ಯಾಪ್ ನೋಡಿ ಕಳ್ಳತನ ಮಾಡುತ್ತಿದ್ದ ಕಳ್ಳರು ಅಂದರ್.!

 

ಜಮ್‌ಶೆಡ್‌ಪುರ: ತಂತ್ರಜ್ಞಾನ ಬೆಳೆದಂತೆಲ್ಲಾ ಅಪರಾಧಿಗಳು ಕೂಡ ಅಷ್ಟೇ ಅಪ್‌ಡೇಟ್ ಆಗುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಗೂಗಲ್ ಮ್ಯಾಪ್ ಮೂಲಕ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಬಿಹಾರ ಮೂಲದ ಅಂತರರಾಜ್ಯ ಕಳ್ಳರ ತಂಡವನ್ನು ಜಮ್‌ಶೆಡ್‌ಪುರ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಬಿಹಾರ ಸೇರಿದಂತೆ ಮೂರು ರಾಜ್ಯಗಳಲ್ಲಿ ಈ ಗ್ಯಾಂಗ್ ತನ್ನ ಕೈಚಳಕ ತೋರಿಸುತ್ತಿತ್ತು.

ಗೂಗಲ್ ಮ್ಯಾಪ್ ಬಳಸಿ ಸ್ಕೆಚ್ ಈ ತಂಡದ ಕಾರ್ಯವೈಖರಿ ಕೇಳಿದರೆ ಪೊಲೀಸರೇ ಅಚ್ಚರಿಗೊಂಡಿದ್ದಾರೆ. ಯಾವುದೇ ಪರಿಚಿತರಿಲ್ಲದ ನಗರಕ್ಕೆ ಭೇಟಿ ನೀಡುತ್ತಿದ್ದ ಈ ಕಳ್ಳರು, ಗೂಗಲ್ ಮ್ಯಾಪ್ ಮೂಲಕ ಜನವಸತಿ ಪ್ರದೇಶಗಳಲ್ಲಿರುವ ಐಷಾರಾಮಿ ಮನೆಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದರು. ಹೀಗೆ ಸ್ಕೆಚ್ ಹಾಕಿದ ನಂತರ ರಾತ್ರಿ ವೇಳೆ ಕಳ್ಳತನ ಎಸಗುತ್ತಿದ್ದರು. ಕಳ್ಳತನ ಮಾಡಿದ ತಕ್ಷಣ ಯಾರಿಗೂ ಅನುಮಾನ ಬರದಂತೆ ಅದೇ ವೇಗದಲ್ಲಿ ಆ ನಗರವನ್ನು ಬಿಟ್ಟು ಪಾರಾಗುತ್ತಿದ್ದರು. ಈ ಮೂಲಕ ಮೂರು ರಾಜ್ಯಗಳಲ್ಲಿ ಒಟ್ಟು ಆರು ದೊಡ್ಡ ಮನೆಗಳ್ಳತನ ಪ್ರಕರಣಗಳಲ್ಲಿ ಇವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಿಕ್ಕಿಬಿದ್ದಿದ್ದು ಹೇಗೆ? ಸೆಪ್ಟೆಂಬರ್ 19 ರಂದು ಗೋಲ್ಮುರಿಯ ರಿಷಭ್ ಕುಮಾರ್ ಎಂಬುವವರ ಮನೆಯಲ್ಲಿ ನಡೆದ ಕಳ್ಳತನ ಈ ತಂಡಕ್ಕೆ ಸಂಕಷ್ಟ ತಂದೊಡ್ಡಿದೆ. ದೂರು ದಾಖಲಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಎಸ್‌ಎಸ್‌ಪಿ ಪಿಯೂಷ್ ಪಾಂಡೆ ನೇತೃತ್ವದ ವಿಶೇಷ ತಂಡ, ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದೆ. ತಾಂತ್ರಿಕ ವಿಶ್ಲೇಷಣೆ ಮತ್ತು ಗುಪ್ತಚರ ಮಾಹಿತಿ ಆಧಾರದ ಮೇಲೆ ಬಿಹಾರದ ಪಾಟ್ನಾದಲ್ಲಿ ಅಡಗಿದ್ದ ವಿಕಾಸ್ ಕುಮಾರ್ (27), ರಾಜು ಕುಮಾರ್ (49) ಮತ್ತು ಮೊಹಮ್ಮದ್ ಇರ್ಫಾನ್ (26) ಎಂಬುವವರನ್ನು ಸೆರೆಹಿಡಿಯಲಾಗಿದೆ.

ಮಾರಕಾಸ್ತ್ರಗಳ ವಶ ಬಂಧಿತರಿಂದ ಒಂದು ಪಿಸ್ತೂಲ್, ಜೀವಂತ ಗುಂಡುಗಳು, ಕಳವು ಮಾಡಲಾಗಿದ್ದ ಬಂಗಾರದ ಆಭರಣಗಳು ಹಾಗೂ ಮನೆ ಮುರಿಯಲು ಬಳಸುತ್ತಿದ್ದ ಸಲಕರಣೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ತಂಡಕ್ಕೆ ಸ್ಥಳೀಯವಾಗಿ ಯಾರಾದರೂ ಸಹಾಯ ಮಾಡುತ್ತಿದ್ದರೇ ಎಂಬ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026