LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಬೆಲೆ ಇಷ್ಟು.!

 

ಚಿತ್ರದುರ್ಗ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಕಡಲೆಕಾಳು ಖರೀದಿಸಲು ಉದ್ದೇಶಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಕೆಎಸ್‍ಸಿಎಂಎಫ್ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಬಸವೇಶ ತಿಳಿಸಿದ್ದಾರೆ.

ನಾಫೆಡ್ ಸಂಸ್ಥೆಯ ಸಹಯೋಗದೊಂದಿಗೆ ಕಡಲೆಕಾಳು ಖರೀದಿ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯ ರೈತರು ತಮ್ಮ ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ಮೂಲಕ ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಆದೇಶದಂತೆ ಪ್ರತಿ ಕ್ವಿಂಟಾಲ್‍ಗೆ ರೂ.5875ರಂತೆ ಪ್ರತಿ ರೈತರಿಂದ ಪ್ರತಿ ಎಕೆರೆಗೆ 4 ಕ್ವಿಂಟಾಲ್‍ನಂತೆ ಗರಿಷ್ಟ 40 ಕ್ವಿಂಟಾಲ್ ನಿಗದಿಪಡಿಸಿದ್ದು, ಕಡಲೆಕಾಳು ಖರೀದಿ ಮಾಡಲು ಜಿಲ್ಲಾ ಟಾಸ್ಕ್‍ಪೋರ್ಸ್‍ನಲ್ಲಿ ತೀರ್ಮಾನಿಸಲಾಗಿದೆ.

ಕಡಲೆಕಾಳು ಖರೀದಿ ಕೇಂದ್ರಗಳ ಮಾಹಿತಿ: ಚಿತ್ರದುರ್ಗ ತಾಲೂಕಿನಲ್ಲಿ ಚಿತ್ರದುರ್ಗ ಟೌನ್ ಸಹಕಾರ ಸಂಘ-8904308894, ಮಾಡನಾಯಕನಹಳ್ಳಿ-7975789403, ಚಿಕ್ಕಗೊಂಡನಹಳ್ಳಿ ಸಹಕಾರಿ ಸಂಘ-6362187408 ಹಾಗೂ ತುರವನೂರಿನ ಶ್ರೀ ಮಂಜುನಾಥ ಸ್ವಾಮಿ ರೈತ ಉತ್ಪಾದಕರ ಕಂಪನಿ-9620266826, ಚಳ್ಳಕೆರೆ ತಾಲೂಕಿನಲ್ಲಿ ರಾಮಜೋಗಿಹಳ್ಳಿ-9741392578, ಚಿಕ್ಕಮಧುರೆ ಸಹಕಾರ ಸಂಘ-6362928198, ಚಳ್ಳಕೆರೆ ಟಿಎಪಿಸಿಎಂಎಸ್-9844897046,  ಹಿರಿಯೂರು ತಾಲೂಕಿನಲ್ಲಿ ಮರಡಿಹಳ್ಳಿ ಸಹಕಾರ ಸಂಘ-9972604427, ಭರಂಪುರ (ಐಮಂಗಲ) ಸಹಕಾರ ಸಂಘ-9986182809, ಹಿರಿಯೂರು ಟಿ.ಎ.ಪಿ.ಸಿ.ಎಂ.ಸಿ-9611477549, ಲಕ್ಕವ್ವನಹಳ್ಳಿ ಸಹಕಾರ ಸಂಘ-9448697162, ಈಶ ರೈತ ಉತ್ಪಾದಕ ಕೇಂದ್ರ ನಿಯಮಿತ-9513553959.  ಹೊಸದುರ್ಗ ತಾಲ್ಲೂಕಿನಲ್ಲಿ ಹೊಸದುರ್ಗ ರಸ್ತೆ ಸಹಕಾರ ಸಂಘ-9483653725, ಹೊಳಲ್ಕೆರೆ ತಾಲೂಕಿನಲ್ಲಿ ರಾಮಗಿರಿ ಸಹಕಾರ ಸಂಘ-9663847812, ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಟಿ.ಎ.ಪಿ.ಸಿ.ಎಂ.ಸಿ ಸಹಕಾರ ಸಂಘ-988645222 ಇಲ್ಲ್ಲಿ ಕಡಲೆ ಕಾಳು ಖರೀದಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026