ಇಂದಿನ ವಚನ:- -ಮಾದಾರ ಧೂಳಯ್ಯ ಅವರ ವಚನ..!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಟ್ಟೆಯ ಚುಚ್ಚುವ ಉಳಿಯ ಮೊನೆಯಲ್ಲಿ,
ಪ್ರತ್ಯಕ್ಷವಾದ ಪರಮೇಶ್ವರನ ಕಂಡು,
ಇತ್ತಲೇಕಯ್ಯಾ, ಕಾಯದ ತಿತ್ತಿಯ ಹೊತ್ತಾಡುವನ ಮುಂದೆ ?
ನಿನ್ನ ಭಕ್ತರ ಠಾವಿನಲ್ಲಿಗೆ ಹೋಗಿ ಮುಕ್ತಿಯ ಮಾಡು.
ನೀ ಹೊತ್ತ ಬಹುರೂಪ[ದಿ] ತಪ್ಪದೆ
ರಜತಬೆಟ್ಟದ ಮೇಲಕ್ಕೆ ಹೋಗು,
ನಿನ್ನ ಭಕ್ತರ ಮುಕ್ತಿಯ ಮಾಡು.
ಕಾಮಧೂಮ ಧೂಳೇಶ್ವರನ ಕರುಣದಿಂದ ನೀನೆ ಬದುಕು.
-ಮಾದಾರ ಧೂಳಯ್ಯ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.