ವಚನ: -ಬಸವಣ್ಣ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮಡಿವಾಳ ಮಡಿವಾಳನೆಂಬರು, ಮಡಿವಾಳನೆಂಬುದನಾರೂ ಅರಿಯರು,
ಎನ್ನ ಮಲಯದಲ್ಲಿ ಹೊದಕುಳಿಗೊಂಡ ಮನದ ಮೈಲಿಗೆಯ ತಂದು,
ತನ್ನ ಮನೆಗೆ ಕೊಂಡುಹೋಗಿ ಹಾಯ್ಕಿದಡೆ,
ಕೈಮುಟ್ಟಿದಡೆ ಆಗದೆಂದು ತನ್ನ ಪಾದದೊಳಗೆ ಮೆಟ್ಟಿ, ಅಲುಬಿ ಸೆಳೆದನಯ್ಯಾ.
ತನ್ನ ನಿರ್ಮಲವ ಕೊಟ್ಟನೆನಗೆ,
ಆ ಕೊಟ್ಟ ಬೀಳುಡಿಗೆಯ ಹೊದೆದುಕೊಂಡೆನಾಗಿ,
ಮಡಿವಾಳ ಮಾಚಿತಂದೆಯ ಕೃಪೆಯಿಂದಲಾನು ಬದುಕಿದೆನಯ್ಯಾ,
ಕೂಡಲಸಂಗಮದೇವಾ.
-ಬಸವಣ್ಣ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.