LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೋಡಂಬಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಕ್ಕೆ ತರಬೇತಿ.!

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 19ರಂದು ಬೆಳಿಗ್ಗೆ 10ಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ರೈತರಿಗೆ ಗೋಡಂಬಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ವಿಜ್ಞಾನಿಗಳಾದ ಡಾ. ಸದಾಶಿವ ನಡುಕೇರಿಇವರುಗೋಡಂಬಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತುಮಾಹಿತಿ ನೀಡುವರು. ನಂತರ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಪ್ರಗತಿಪರ ರೈತರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎಸ್.ರಘುನಾಥ, ಚಳ್ಳಕೆರೆ ತಾಲ್ಲೂಕಿನ ಮೀರಸಾಬಿಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ದಯಣ್ಣ ಬಿ.ಕೆ ಮತ್ತು ಚಿಕ್ಕಚೆಲ್ಲೂರು ಗ್ರಾಮದ ಪ್ರಗತಿಪರ ಕೃಷಿಕರಾದ ಎನ್.ತಿಪ್ಪೇಸ್ವಾಮಿ ಅವರು ರೈತರಿಗೆ ಗೋಡಂಬಿ ಬೆಳೆಯಲ್ಲಿ ಯಶಸ್ವಿಯಾಗಿ ಹೆಚ್ಚಿನ ಇಳುವರಿ ಪಡೆಯಲು ತಾವು ಅನುಸರಿಸಿದ ಕ್ರಮಗಳ ಕುರಿತು ಅನುಭವವನ್ನು ಹಂಚಿಕೊಳ್ಳುವರು. ಆದ ಪ್ರಯುಕ್ತ, ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ನೋಂದಣಿ ಮಾಡಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಮೊದಲು ನೋಂದಾವಣಿ ಮಾಡಿಕೊಂಡ 50ಜನ ರೈತ ಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು.ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಬೇಕು ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026