Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ತುಂತುರು ಮತ್ತು ಹನಿ ನೀರಾವರಿ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (
PMRKVY)  ಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು 3 ದಿನಗಳ ತರಬೇತಿಯನ್ನು ಇದೇ ಮಾರ್ಚ್ 05 ರಿಂದ 07 ರವರೆಗೆ  ಚಿತ್ರದುರ್ಗ ತಾಲ್ಲೂಕಿನ ಆಸಕ್ತ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

       ತರಬೇತಿ ಕಾರ್ಯಕ್ರಮದಲ್ಲಿ ಮೊದಲನೇ ದಿನ ನೆಟಾಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞರಾದ ಅಂಜಿನಪ್ಪ ಅವರು ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಸಮರ್ಪಕ ಅಳವಡಿಕೆ ಮತ್ತು ಅವುಗಳ ನಿರ್ವಹಣೆ ಹಾಗೂ ರಸಾವರಿ ಪದ್ಧತಿ ಕುರಿತು ಮಾಹಿತಿ ನೀಡುವರು.

ಎರಡನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಹಾಗೂ ಕೀಟಶಾಸ್ತ್ರಜ್ಞರಾದ ಡಾ. ದಾನ ರೆಡ್ಡಿ ಅವರು ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕುರಿತು ಮಾಹಿತಿ ನೀಡುವರು. ನಂತರ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಅವರು ಸಾವಯವ ಪದ್ಧತಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ನೀರು ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು.

ತರಬೇತಿಯ ಮೂರನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಒಬ್ಬೂರಿನ ಶ್ರೀ ಹನುಮಂತ ನಾಯಕ್ ಅವರು ಜೇನು ಕೃಷಿ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬ ನಿರ್ವಹಣೆ ಹಾಗೂ ಎರೆ ಗೊಬ್ಬರ ತಯಾರಿಕೆ ಕುರಿತು ಕುರಿತು ಮಾಹಿತಿ ನೀಡುವರು.

ಆದ ಪ್ರಯುಕ್ತ ಆಸಕ್ತ 50 ಜನ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್‍ಐಡಿ ಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ ಆರ್ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ