Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಫೆ.5 ರಿಂದ ಮಾವು ಬಾಳೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಕುರಿತು ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.05 ರಿಂದ 07 ರವರೆಗೆ ಜಿಲ್ಲೆಯ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕ್ರಮವಾಗಿ ದಾಳಿಂಬೆ, ಮಾವು ಹಾಗೂ ಬಾಳೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಫೆ.05ರಂದು ಬೆಳಿಗ್ಗೆ 10ಕ್ಕೆ ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಧರ್ ಅವರು ದಾಳಿಂಬೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು, ರೋಗಶಾಸ್ತ್ರಜ್ಞ ಡಾ.ಗುರುದೇವಿ ಅವರು ಬೆಳೆಯಲ್ಲಿ ಬರುವ ರೋಗಗಳ ನಿರ್ವಹಣೆ ಹಾಗೂ ಕೀಟಶಾಸ್ತ್ರಜ್ಞರಾದ ಡಾ.ತಾರಣಿ ಅವರು ದಾಳಿಂಬೆ ಬೆಳೆಯಲ್ಲಿ ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.  

ಫೆ.06 ರಂದು ಬೆಳಿಗ್ಗೆ 10ಕ್ಕೆ ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಧರ್ ರವರು ಮಾವು ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಹಾಗೂ ಬೆಳೆಯಲ್ಲಿ ಬರುವ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿಯಾದ ಡಾ.ಟಿ.ರುದ್ರಮುನಿ ವಿಷಯ ಮಂಡನೆ ಮಾಡುವರು.  

ಫೆ.07ರಂದು ಬೆಳಿಗ್ಗೆ 10ಕ್ಕೆ ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ತಜ್ಞರಾದ ಡಾ.ಪಿ.ಎಸ್. ಮಹಾಂತೇಶ್ ಅವರು  ಬಾಳೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಹಾಗೂ ಬೆಳೆಯಲ್ಲಿ ಬರುವರೋಗ ಮತ್ತು  ಕೀಟಗಳ ನಿರ್ವಹಣೆ ಕುರಿತು ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಹಿರಿಯ ಕ್ಷೇತ್ರ ಸಹಾಯಕರಾದ ಡಾ.ಜಿ.ಹನುಮಂತನಾಯಕ್ ವಿಷಯ ಮಂಡನೆ ಮಾಡುವರು.  

ಮೂರು ದಿನಗಳಲ್ಲಿ ಸಹ ಬೆಂಗಳೂರಿನ ಜೈನ್ ಇರಿಗೇಷನ್ ಕಂಪನಿಯ ಕೆ.ದೇವರಾಜ್ ಅವರು ನೀರಿನ ಸಮರ್ಥ ಬಳಕೆ,  ದಾಳಿಂಬೆ, ಮಾವು ಹಾಗೂ ಬಾಳೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮಾಡುವರು.  

ಪ್ರತಿ ದಿನ ಆಸಕ್ತ ಚಿತ್ರದುರ್ಗ ಜಿಲ್ಲೆಯ 60 ಜನ ರೈತಭಾಂದವರು  ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ ಹಾಗೂ ಮೊದಲು ನೋಂದಾವಣಿ ಮಾಡಿಕೊಂಡ 60 ಜನ ರೈತಭಾಂದವರನ್ನು ತರಬೇತಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ