LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತೀಯ ಮೂಲದ ಆಪ್ತ 'ಕಾಶ್'ಪಟೇಲ್‌ರನ್ನು FBI ಮುಖ್ಯಸ್ಥರಾಗಿ ನೇಮಿಸಿದ ಟ್ರಂಪ್

ನ್ಯೂಯಾರ್ಕ್: ಅಮೆರಿಕಾದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಆಪ್ತ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ನ ನಿರ್ದೇಶಕರ ಪ್ರಬಲ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದಾರೆ. ಕಶ್ಯಪ್ 'ಕಾಶ್' ಪಟೇಲ್ ಅವರು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ನ ಮುಂದಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಕಾಶ್ ಒಬ್ಬ ಅದ್ಭುತ ವಕೀಲ, ತನಿಖಾಧಿಕಾರಿ ಮತ್ತು 'ಅಮೆರಿಕಾ ಫಸ್ಟ್' ಹೋರಾಟಗಾರ, ಭ್ರಷ್ಟಾಚಾರವನ್ನು ಬಹಿರಂಗಪಡಿಸಲು, ನ್ಯಾಯವನ್ನು ರಕ್ಷಿಸುವಲ್ಲಿ ಅವರು ವೃತ್ತಿಜೀವನ ಕಳೆದಿದ್ದಾರೆ ಎಂದು ಟ್ರಂಪ್ ಅವರ ಮಾಲೀಕತ್ವದ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್‌ನಲ್ಲಿ ಘೋಷಿಸಿದ್ದಾರೆ. ಸತ್ಯ, ಉತ್ತರದಾಯಿತ್ವ ಮತ್ತು ಸಂವಿಧಾನದ ಪ್ರತಿಪಾದಕರಾಗಿ ನಿಂತಿರುವ "ರಷ್ಯಾ ವಂಚನೆ" ಯನ್ನು ಬಯಲಿಗೆಳೆಯುವಲ್ಲಿ ಪಟೇಲ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ. 44 ವರ್ಷದ ಪಟೇಲ್ ಅವರು 2017 ರಲ್ಲಿ ಟ್ರಂಪ್ ಆಡಳಿತದ ಕೊನೆಯ ಕೆಲವು ವಾರಗಳಲ್ಲಿ ಯುನೈಟೆಡ್ ಸ್ಟೇಟ್ಸ್ ರಕ್ಷಣಾ ಕಾರ್ಯದರ್ಶಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ನ್ಯೂಯಾರ್ಕ್ ಮೂಲದ ಪಟೇಲ್ ಅವರು ಮೂಲತಃ ಭಾರತದ ಗುಜರಾತಿನವರು. ಅವರ ಪೋಷಕರು ಪೂರ್ವ ಆಫ್ರಿಕಾದ ತಾಯಿ ತಾಂಜಾನಿಯಾದಿಂದ ಮತ್ತು ತಂದೆ ಉಗಾಂಡಾದಿಂದ ಬಂದವರು. 1970 ರ ದಶಕದಲ್ಲಿ ಕೆನಡಾದಿಂದ ಅಮೆರಿಕಾಕ್ಕೆ ಬಂದರು. 70 ರ ದಶಕದ ಉತ್ತರಾರ್ಧದಲ್ಲಿ ಕುಟುಂಬವು ನ್ಯೂಯಾರ್ಕ್‌ನ ಬಂದು ನೆಲೆಸಿತು. ಕಾಶ್ ಪಟೇಲ್ ಜನಿಸಿದ್ದು ಅಲ್ಲಿಯೇ. ಪಟೇಲ್ ಅವರ ಪೋಷಕರು ಈಗ ನಿವೃತ್ತರಾಗಿ ಯುಎಸ್ ಮತ್ತು ಗುಜರಾತ್ ಎರಡರಲ್ಲೂ ತಮ್ಮ ಸಮಯವನ್ನು ಕಳೆಯುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರುಗಾಳಿ ಸಹಿತ ಭಾರಿ ಮಳೆ.! ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ ..! 30-07-2025.!ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!