LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ಯ ಸ್ವಾತಂತ್ರ್ಯ

ಜನವರಿ 26ರ ಗಣರಾಜ್ಯೋತ್ಸವ, ಆಗಸ್ಟ್ 15ರ ಸ್ವಾತಂತ್ರ್ಯ್ರ ದಿನ, ಅಕ್ಟೋಬರ್ 2ರ ಗಾಂಧಿ ಜಯಂತಿ ಈ ಮೂರು ಉತ್ಸವಗಳು ರಾಷ್ಟ್ರೀಯ ಹಬ್ಬಗಳಾಗಿವೆ. ಭಾರತದಲ್ಲಿ ಈ ಹಬ್ಬಗಳನ್ನು ದೇಶ-ಪ್ರೇಮ ಮತ್ತು ರಾಷ್ಟ್ರಭಕ್ತಿ-ಭಾವದಿಂದ ಆಚರಿಸುತ್ತಾರೆ. ಅಂದು ಅನೇಕ ಸ್ಥಳಗಳಲ್ಲಿ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಭಾರತ ದೇಶವು ಸ್ವತಂತ್ರವಾಗಿ ಇಂದು 77 ವರ್ಷಗಳು ಕಳೆದಿದ್ದು 78 ನೇ ಸ್ವಾತಂತ್ರೋತ್ಸವವನ್ನು ಈ ಬಾರಿ ಅಚರಿಸಲಾಗುವುದು. ಸ್ವಾತಂತ್ರೋತ್ಸವದಲ್ಲಿ ‘ವಿಕಸಿತ ಭಾರತ’ವೆಂಬುದು ಧ್ಯೇಯವಾಕ್ಯವಾಗಿದ್ದು 2047 ರಲ್ಲಿ ಭಾರತ ಆಭಿವೃದ್ಧಿಶೀಲ ರಾಷ್ಟ್ರ ಆಗಲಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಬಾಲ ಗಂಗಾಧರ ತಿಲಕ್, ಸರೋಜಿನಿ ನಾಯ್ಡು, ಪಂಡಿತ್ ಮದನ್ ಮೋಹನ್ ಮಾಳವೀಯ, ಅನಿಬೆಸೆಂಟ್, ಚಂದ್ರಶೇಖರ್ ಆಜಾದ್, ಲಾಲಾಲಜಪತ ರಾಯ್, ಮೌಲಾನಾ ಅಬ್ದುಲ್ ಕಲಾಂ ಆಜಾದ್, ತಾತ್ಯಾ ಟೋಪೆ ವೀರ ಸಾವರ್ಕರ್, ಸುಭಾಷಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಭಗತಸಿಂಗ್, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮುಂತಾದ ಅನೇಕ ಗಣ್ಯರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುತ್ತದೆ. ಇವರೆಲ್ಲರೂ ಮಾಡಿದ ಹೋರಾಟ, ಚಳುವಳಿ ಪರಿಶ್ರಮದ ಫಲದಿಂದ ಭಾರತ ದೇಶ ಆಗಸ್ಟ್ 15 ರಂದು ಸ್ವತಂತ್ರವಾಯಿತು. ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹೋರಾಟಗಾರರು ನೀಡಿದ 10 ಕ್ರಾಂತಿಕಾರಿ ಪ್ರೇರಣಾ ವಾಕ್ಯಗಳು ಈ ರೀತಿಯಾಗಿವೆ:


1. ಮಾಡು ಇಲ್ಲವೆ ಮಡಿ – ಮಹಾತ್ಮ ಗಾಂಧೀಜಿ.
2. ನಾನು ಭಾರತದ ರಾಷ್ಟ್ರೀಯತೆಯ ಅವಿಭಾಜ್ಯ ಅಂಗವಾಗಿದ್ದೇನೆ – ಕಲಾಂ ಆಜಾದ್.
3. ನನಗೆ ರಕ್ತವನ್ನು ನೀಡಿದರೆ ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡತ್ತ್ತೇನೆ- ಸುಭಾಷ್ಚಂದ್ರ ಬೋಸ್.
4. ಅವರು ನನ್ನನು ಕೊಲ್ಲಬಹುದು, ಆದರೆ ನನ್ನ ಅಲೋಚನೆಗಳನ್ನು ಕೊಲ್ಲಲು ಸಾಧ್ಯವಿಲ್ಲ; ಅವರು ನನ್ನ ದೇಹವನ್ನು ನುಚ್ಚುಮಾಡಬಹುದು, ಆದರೆ ನನ್ನ ಸ್ಫೂರ್ತಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ - ಭಗತಸಿಂಗ್.
5. ಸ್ವಾತಂತ್ರ್ಯವನ್ನು ನೀಡಲಾಗಿಲ್ಲ, ಅದನ್ನು ತೆಗೆದುಕೊಳ್ಳಲಾಗಿದೆ. ನಿಮ್ಮ ಹಕ್ಕುಗಳಿಗಾಗಿ ಹೋರಾಡಿ - ಲಜಪತ್ ರಾಯ್.
6. ಸ್ವಾತಂತ್ರ್ಯವು ಪ್ರತಿ ದೇಶದ ಜನ್ಮಸಿದ್ಧ ಅಧಿಕಾರ- ಅನಿಬೆಸೆಂಟ್.
7. ಜನರು ಶಿಕ್ಷಣ ಪಡೆದಾಗ ಮಾತ್ರ ರಾಷ್ಟ್ರವು ಉನ್ನತಿ ಹೊಂದಲು ಸಾಧ್ಯ - ಪಂಡಿತ್ ಮದನ್ ಮೋಹನ್ ಮಾಳವೀಯ.
8. ದೇಶದ ಶ್ರೇಷ್ಠತೆಯು ತಾಯಂದಿರನ್ನು ಪ್ರೇರೇಪಿಸುವ ಪ್ರೀತಿ ಮತ್ತು ತ್ಯಾಗದ ಶಾಶ್ವತ ಆದರ್ಶವಾಗಿದೆ -ಸರೋಜಿನಿ ನಾಯ್ಡು.
9. ಸ್ವರಾಜ್ಯ ನನ್ನ ಜನ್ಮಸಿದ್ಧ ಅಧಿಕಾರವಾಗಿದೆ, ಅದನ್ನು ಅವಶ್ಯವಾಗಿ ಪಡೆದುಕೊಳ್ಳುತ್ತೇನೆ - ತಿಲಕ್.
10. ನಾವು ಶತ್ರುಗಳ ಗುಂಡುಗಳನ್ನು ಎದುರಿಸಿ ಸ್ವತಂತ್ರವಾಗಿದ್ದೇವೆ ಮತ್ತು ಸ್ವತಂತ್ರವಾಗಿ ಇರುತ್ತ್ತೇವೆ- ಚಂದ್ರಶೇಖರ್ ಆಜಾದ್.

ಸಂವಿಧಾನದ ಪ್ರಕಾರ ನಮಗೆ ಆಚಾರ-ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯವಿದೆ.
ಸ್ವತಂತ್ರವಾಗಿರಲು ಯಾರು ಇಷ್ಟಪಡುವುದಿಲ್ಲ? ಈ ಸೃಷ್ಟಿಯಲ್ಲಿ ಪ್ರತಿಯೊಬ್ಬರು ತಾನು ಸ್ವತಂತ್ರವಾಗಿ ಇರಬೇಕು ಮತ್ತು ಸ್ವತಂತ್ರವಾಗಿ ಬಾಳಬೇಕೆಂದು ಬಯಸುತ್ತಾರೆ. ಮೃಗಾಲಯದ ಪ್ರಾಣಿಗಳಿಗೆ, ಪಂಜರದ ಪಕ್ಷಿಗೆ, ಬಲೆಯಲ್ಲಿ ಸಿಕ್ಕಿರುವ ಮೀನುಗಳಿಗೆ, ಜೈಲುಗಳಲ್ಲಿರುವ ಕೈದಿಗಳಿಗೆ ಮುಕ್ತರಾಗಬೇಕೆಂಬ ಹಂಬಲವಿರುತ್ತದೆ. ಮಾನವನ ಮನಸ್ಸು ಸ್ವತಂತ್ರವಾಗಿ ನೀಲಿ ಆಕಾಶದಲ್ಲಿ ಹಕ್ಕಿಯಂತೆ ಹಾರುತ್ತಿರಬೇಕೆಂದು ಬಯಸುತ್ತದೆ. ಮನುಷ್ಯನು ಯಾವುದೇ ಭಯ, ಚಿಂತೆ, ಒತ್ತಡ, ಕಾಯಿಲೆ, ಸಮಸ್ಯೆಗಳಿಗೆ ವಶನಾಗದೇ ನಿರ್ಭಯನಾಗಿರಬೇಕೇಂದು ಬಯಸುತ್ತಾನೆ.
ಈಶ್ವರೀಯ ವಿಶ್ವವಿದ್ಯಾಲಯ ಜ್ಞಾನದ ಪ್ರಕಾರ ಮತ್ತು ಭಗವಂತನ ಜ್ಞಾನದ ಆಧಾರದಿಂದ ಸರ್ವಾಂಗೀಣ ಸ್ವಾತಂತ್ರ್ಯವನ್ನು 6 ವಿಭಾಗಗಳಲ್ಲಿ ವಿಂಗಡಿಸಬಹುದು.
1. ಶಾರೀರಿಕ ಸ್ವಾತಂತ್ರ್ಯ : ಮಾನವ ಯಾವುದಾದರೂ ಕಾಯಿಲೆಗಳು, ದೈಹಿಕ ನ್ಯೂನ್ಯತೆ ಮತ್ತು ಅಪಘಾತಗಳಿಗೆ ತುತ್ತಾಗುತ್ತಾನೆ. ವೃದ್ಧಾವಸ್ಥೆಯನ್ನು ತಲುಪಿದಾಗ ಅನೇಕ ಶಾರೀರಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅವನು ರೋಗಗಳಿಂದ ಮುಕ್ತನಾಗಲು ತನ್ನ ಹಣವನ್ನು ನೀರಿನಂತೆ ಖರ್ಚು ಮಾಡಲು ತಯಾರಾಗುತ್ತಾನೆ. ಶರೀರ ಸದೃಢವಾಗಿರದಿದ್ದರೆ ಅವನ ಜೀವನ ನೀರಸವೆನಿಸುತ್ತದೆ.
2. ಆರ್ಥಿಕ ಸ್ವಾತಂತ್ರ್ಯ : ಮಾನವ ಹಣದ ಕೊರತೆಯಿಂದ ಪ್ರಭಾವಿತನಾಗಿ ಕಳ್ಳತನ, ದರೋಡೆ, ಮೋಸ, ವಂಚನೆ, ಮಾಡಲು ಪ್ರಾರಂಭಿಸುತ್ತಾನೆ. ಅವನಿಗೆ ಜೀವನ ಸಾಗಿಸಲು ಸಾಕಷ್ಟು ಸಂಪತ್ತು ಇರಬೇಕು.
3. ಮಾನಸಿಕ ಸ್ವಾತಂತ್ರ್ಯ : ಆರೋಗ್ಯ ಸರಿಯಿದ್ದರೂ ಸಂಪತ್ತಿನ ಕೊರತೆಯಿದ್ದರೆ ಅವನಿಗೆ ಚಿಂತೆ ಕಾಡುತ್ತ್ತಿರುತ್ತದೆ. ಆಗ ಅವನು ಸುಖಿಯಾಗಲು ಸಾಧ್ಯವಿಲ್ಲ. ಮನಸ್ಸಿನಲ್ಲಿ ಅಪಘಾತ, ಸಂಕಟದ ಭಯವಿದ್ದರೆ ಅವನ ಜೀವನ ದು:ಖಿಯಾಗುತ್ತದೆ.
4. ಸಂಬಂಧದ ಸ್ವಾತಂತ್ರ್ಯ: ಅನೇಕ ಸಂಬಂಧಗಳು ಮಾನವನಿಗೆ ದು:ಖವನ್ನು ನೀಡುತ್ತವೆ ತಂದೆ ತಾಯಿಯ ಆಸೆಗಳು, ಮಕ್ಕಳ ಕಾಟ, ಪತ್ನಿಯ ಬೇಡಿಕೆಗಳು, ಅಧಿಕಾರಿಯ ಸೂಚನೆಗಳು ಅವನಿಗೆ ಚಿಂತೆಯ ವಿಷಯವಾಗಿರುತ್ತವೆ. ಸಂಬಂಧಗಳಲ್ಲಿ ಪ್ರೀತಿ, ಸ್ನೇಹ ಸಹಯೋಗವಿದ್ದರೆ ಜೀವನ ಸುಖಮಯವಾಗಿರುತ್ತದೆ.
5. ಪ್ರಕೃತಿಯ ಸ್ವಾತಂತ್ರ್ಯ : ನಿರೋಗಿ ಕಾಯ, ಸಂಪತ್ತು, ಸಂಬಂಧಗಳ ಸುಖ, ಮಾನಸಿಕ ಅರೋಗ್ಯ ಎಲ್ಲವೂ ಇದ್ದು, ಪ್ರಕೃತಿಯ ವಿಕೋಪವಿದ್ದರೆ ಅವನ ಜೀವನ ಸಂಕಟಮಯವಾಗುತ್ತದೆ. ಅತಿವೃಷ್ಟಿ, ಅನಾವೃಷ್ಟಿ, ಮಂಗನ ಕಾಯಿಲೆ, ಕರೊನಾ 3 ನೇ ಅಲೆ, ಡೆಲ್ಟಾ, ಡೆಂಗ್ಯೂ ಜ್ವರ, ಬಿಸಿಲು, ಚಳಿಯಿಂದ ಮಾನವ ಪರಿತಪಿಸುತ್ತಿದ್ದಾನೆ.
6. ರಾಜಕೀಯ ಸ್ವಾತಂತ್ರ್ಯ : ನಮ್ಮ ದೇಶ ಸಾವಿರಾರು ವರ್ಷಗಳಿಂದ ಪರತಂತ್ರವಾಗಿತ್ತು. ರಾಜಕೀಯ ಸ್ವಾತಂತ್ರ್ಯಕ್ಕೆ ಬಹಳ ಮಹತ್ವವಿದೆ. ದೇಶ ರಕ್ಷಣೆಗಾಗಿ ಮಿಲಿಟರಿ ಇರುತ್ತದೆ. ಶತ್ರು ದೇಶಗಳ ಆಕ್ರಮಣದ ಚಿಂತೆ ಸದಾ ಇರುತ್ತದೆ.


ಮನುಷ್ಯನು ಪಕೃತಿಗೆ ಮಾಲೀಕನಾಗಿರಬೇಕು. ಪ್ರಕೃತಿಯೆಂದರೆ ಕೇವಲ ಪಂಚ ತತ್ವಗಳಷ್ಟೇ ಅಲ್ಲ, ನಮ್ಮ ಶರೀರದಲ್ಲಿರುವ ಪಂಚೇಂದ್ರಿಯಗಳಾದ ಕಣ್ಣು, ಕಿವಿ, ಬಾಯಿ, ಕೈ ಕಾಲು, ಚರ್ಮಗಳೂ ಸಹ ಪ್ರಕೃತಿಯೇ. ಇವುಗಳೊಂದಿಗೆ ಸೂಕ್ಷ್ಮ ಕರ್ಮೇಂದ್ರಿಯಗಳಾದ ಮನಸ್ಸು-ಬುದ್ಧಿ-ಸಂಸ್ಕಾರಗಳು ನಮ್ಮ ಹತೋಟಿಯಲ್ಲಿದ್ದರೆ ಮಾತ್ರ ನಾವು ನಿಜವಾದ ಸ್ವತಂತ್ರರು.
ಸ್ವಾತಂತ್ರ್ಯತೆ ಮತ್ತು ಸ್ವಚ್ಛಂದತೆಯಲ್ಲಿ ಅಂತರವಿದೆ. ಆದರೆ ಇಂದು ಮಾನವ ತನ್ನ ದುರ್ಬಲತೆಗಳಿಂದಾಗಿ ಸ್ವಾತಂತ್ರ್ಯದ ಯಥಾರ್ಥವನ್ನು ತಿಳಿದುಕೊಳ್ಳದೇ ಕಾಮ, ಕೋಧ, ಲೋಭ, ಮೋಹ, ಅಹಂಕಾರ ಮುಂತಾದ ವಿಕಾರಗಳಿಗೆ ವಶನಾಗಿ ಸ್ವಚ್ಛಂದ ಜೀವನಕ್ಕೆ ದಾಸನಾಗಿದ್ದಾನೆ. ಆದ್ದರಿಂದಲೇ ಮಾನವ ದು:ಖ, ಅಶಾಂತಿ, ಭಯ, ರೋಗ, ಚಿಂತೆ, ಪ್ರ್ರಾಕೃತಿಕ ವಿಕೋಪಗಳು ಮತ್ತು ಇತರೆ ಸಮಸ್ಯೆಗಳ ಭವಸಾಗರದಲ್ಲಿ ಮುಳುಗಿದ್ದಾನೆ.
ಬನ್ನಿ, ಈ ಸ್ವಾತಂತ್ರ್ಯ ದಿನಾಚರಣೆಯಂದು ನಾವೆಲ್ಲಾ ವಿಕಾರಗಳಿಂದ ಮುಕ್ತರಾಗಲು ರಾಜಯೋಗವನ್ನು ಕಲಿಯೋಣ. ಸರ್ವ ಶಕ್ತಿವಂತ ಭಗವಂತನ ಅತಿಪ್ರಿಯವಾದ ಮಗು ಎಂದು ತಿಳಿದುಕೊಳ್ಳೋಣ. ಅವನ ಛತ್ರಛಾಯೆ ಯೊಳಗಿದ್ದು ದು:ಖ, ಅಶಾಂತಿ, ಭಯ, ರೋಗ, ಚಿಂತೆ, ಪ್ರ್ರಾಕೃತಿಕ ವಿಕೋಪಗಳು ಮತ್ತು ಇತರೆ ಸಮಸ್ಯೆಗಳಿಂದ ಮುಕ್ತರಾಗೋಣ.
ವಿನಾಶಕಾಲೇ ವಿಪರೀತ ಬುದ್ಧಿಯಾಗದೇ ಈ ಅಂತಿಮ ಸಮಯದಲ್ಲಿ ಭಗವಂತನ ಆದೇಶದಂತೆ ನಡೆದು ರಾಮರಾಜ್ಯ (ಸ್ವರ್ಗ) ಸ್ಥಾಪನೆಗೆ ಸಹಾಯ ಮಾಡೋಣ.
ಗಮನವಿರಲಿ : ರಾಷ್ಟ್ರಧ್ವಜದ ಬಗ್ಗೆ ಗೌರವವಿರಲಿ, ಪ್ಲಾಸ್ಟಿಕ್ ಧ್ವಜಗಳನ್ನು ತ್ಯಜಿಸೋಣ.
ಪ್ರತಿಯೊಂದು ಮನೆಯ ಮೇಲೆ ದ್ವಜ ಹಾರಿಸೊಣ- ಹರ್ ಘರ್ ತಿರಂಗ
“ಜೈ ಹಿಂದ್, ಜೈ ಭಾರತಾಂಬೆ, ಜೈ ಜಗನ್ಮಾತೆ.”

-ವಿಶ್ವಾಸ. ಸೋಹೋನಿ.
ಬ್ರಹ್ಮಾಕುಮಾರಿಸ್, ಮೀಡಿಯಾ ವಿಂಗ್,
9483937106
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು