LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಅನ್ನು ಪ್ರಾರಂಭಿಸಿದೆ.

ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಇದು ಹೆಚ್ಚಿನ ಮೌಲ್ಯದ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ಗುಣಮಟ್ಟದ, ವಿವಿಧ ಶ್ರೇಣಿಗಳ ಉಕ್ಕಿನ ಆಮದು ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ಪರಿಣಾಮಕಾರಿ ಎಂದು ಹೇಳಿದ್ದಾರೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪಿಎಲ್ಐ 1.2 ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಕೇಂದ್ರ ಸಚಿವರ ಸಮಕ್ಷಮದಲ್ಲಿ ಉಕ್ಕು ಉದ್ಯಮದ ಪ್ರಮುಖ ಪಾಲುದಾರರೊಂದಿಗೆ ತಿಳಿವಳಿಕೆ ಒಪ್ಪಂದಗಳಿಗೆ (MoU) ಸಹಿ ಹಾಕಲಾಯಿತು. ಇದು ಭಾರತದ ಉಕ್ಕು ಉದ್ಯಮದ ದೀರ್ಘಕಾಲೀನ ಬೆಳವಣಿಗೆಯ ನಿರೀಕ್ಷೆಗಳಲ್ಲಿ ಬಲವಾದ ವಿಶ್ವಾಸವನ್ನು ಮೂಡಿಸುತ್ತದೆ ಎಂದು ಸಚಿವರು ಹೇಳಿದರು.

ಪಿಎಲ್ಐ 1.2 ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುವ ಹಾಗೂ ಉಕ್ಕು ಉದ್ಯಮದಲ್ಲಿ ಸ್ವಾವಲಂಭನೆ ಸಾಧಿಸುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆಯಾಗಿದೆ. ಅಲ್ಲದೆ, ಜಾಗತಿಕವಾಗಿ ಸ್ಪರ್ಧಾತ್ಮಕ ಶಕ್ತಿಯನ್ನು ಹೊಂದಿ ದೇಶದಲ್ಲಿ ಪೂರಕ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ನಿರ್ಣಾಯಕ ಉಪಕ್ರಮವಾಗಿದೆ ಎಂದು ಅವರು ಒತ್ತಿ ಹೇಳಿದರು.

ಈ ಯೋಜನೆಯು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತಕ್ಕೆ ಅನುಗುಣವಾಗಿದ್ದು, ರಾಷ್ಟ್ರೀಯ ಆದ್ಯತೆಗಳಿಗೆ ತಕ್ಕಂತೆ ಉಕ್ಕು ಉದ್ಯಮವನ್ನು ಮುನ್ನಡೆಸುತ್ತದೆ ಎಂದು ಅವರು ಪ್ರತಿಪಾದಿಸಿದರು.

ಪಿಎಲ್ಐ ಯೋಜನೆ 1.2ರ ಅಡಿಯಲ್ಲಿ 85 ಒಪ್ಪಂದಗಳಿಗೆ 55 ಕಂಪನಿಗಳೊಂದಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದ್ದು, ₹11,887 ಕೋಟಿ ಹೂಡಿಕೆ ಮಾಡಲಾಗಿದೆ. ಈ ಯೋಜನೆಗಳು 2031ರ ಹಣಕಾಸು ವರ್ಷದ ವೇಳೆಗೆ 8.7 ಮಿಲಿಯನ್ ಟನ್ ವಿಶೇಷ ಉಕ್ಕಿನ ಉತ್ಪಾದನಾ ಸಾಮರ್ಥ್ಯವನ್ನು ಹೊಂದುವ ನಿರೀಕ್ಷೆಯಿದೆ. ಇದು ಶಕ್ತಿಶಾಲಿ ಉಕ್ಕು, ಮಿಶ್ರಲೋಹ ಮತ್ತು ಸ್ಟೇನ್‌ಲೆಸ್ ಸ್ಟೀಲ್‌ಗಳು, ಲೇಪಿತ ಉತ್ಪನ್ನಗಳು ಮತ್ತು ವಿವಿಧ ರಾಷ್ಟ್ರೀಯ ವ್ಯೂಹಾತ್ಮಕ ವಲಯಗಳಿಗೆ ಅಗತ್ಯವಿರುವ ಅತ್ತುತ್ತಮ ಶ್ರೇಣಿಯ ಉನ್ನತ ಗುಣಮಟ್ಟದ ಉಕ್ಕು ಪೂರೈಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಆಟೋಮೊಬೈಲ್, ರೇಲ್ವೆ, ರಕ್ಷಣೆ, ವಿದ್ಯುತ್ ವಲಯಗಳ ಉಪಕರಣಗಳ ತಯಾರಿಕೆಗೆ ಮತ್ತು ಏರೋಸ್ಪೇಸ್ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಿಗೆ ಅಗತ್ಯವಾದ ವಿಶೇಷ ಉಕ್ಕಿನ ಮೂಪಕ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವತ್ತ ಅಗತ್ಯ ಸಹಕಾರ, ಸಹಯೋಗ ನೀಡುತ್ತದೆ. ಕೈಗಾರಿಕಾ ಬೇಡಿಕೆಗೆ ತಕ್ಕಂತೆ ಪಿಎಲ್ಐ ಯೋಜನೆಯ ಮೂರನೇ ಸುತ್ತನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಯೋಜನೆಯ ವಿಶಾಲ ಪರಿಣಾಮದ ಕುರಿತು ಮಾತನಾಡಿದ ಸಚಿವರು; ಪಿಎಲ್ಐ 1.2 ದೇಶೀಯ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಮೂಲಕ ವಿದೇಶಿ ವಿನಿಮಯವನ್ನು ಸಂರಕ್ಷಿಸುವ ಮೂಲಕ ಭಾರತವನ್ನು ಸುಧಾರಿತ ಉಕ್ಕಿನ ವಿಶ್ವಾಸಾರ್ಹ ಜಾಗತಿಕ ಪೂರೈಕೆದಾರನಾಗಿ ಹೊರಹೊಮ್ಮಿಸುವ ದಿಕ್ಕಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡುತ್ತದೆ ಎಂದರು ಅವರು ಪಾಲುದಾರರಿಗೆ ತಿಳಿಸಿದರು.

ಹಿಂದಿನ ಸುತ್ತಿನ ಎರಡು ಪಿಎಲ್ಐ ಯೋಜನೆಗಳು ಉಕ್ಕು ಉದ್ಯಮದ ನಿರೀಕ್ಷೆಗಳನ್ನು ಪೂರೈಸಿ ರಾಷ್ಟ್ರಕ್ಕೆ ಅನುಕೂಲ ಮಾಡಿವೆ. ಅದರಂತೆಯೇ ಪಿಎಲ್ಐ 1.0 ಮತ್ತು 1.1ರಲ್ಲಿ, ₹43,874 ಕೋಟಿಯಷ್ಟು ನಿಗದಿತ ಹೂಡಿಕೆಗಳು ಈಗಾಗಲೇ ಗುರಿ ಸಾಧಿಸಿವೆ. ಪಿಎಲ್ಐ 1.2 ಯೋಜನೆ ಹಿಂದಿನ ಫಲಿತಾಂಶ ಉತ್ತೇಜನಕಾರಿ ಮುನ್ನಡೆಯಿಂದ ಪ್ರೇರಿತಗೊಂಡು ರೂಪಿಸಲ್ಪಟ್ಟಿದೆ. ದೇಶೀಯ ಉಕ್ಕಿನ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಸಂಪೂರ್ಣ ಮೌಲಿಕ ಸರಪಳಿಯನ್ನು ಗಟ್ಟಿಗೊಳಿಸುವ ಕೆಲಸವನ್ನು ಅದು ಮಾಡುತ್ತದೆ ಎಂದು ಸಚಿವರು ವಿವರಿಸಿದರು.

ಈ ಸಂದರ್ಭದಲ್ಲಿ ಉಕ್ಕು ಸಚಿವಲಾಯದ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ