Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿಶ್ವ ವಿದ್ಯಾಲಯಗಳು ಜ್ಞಾನದಾಹವಾಗಬೇಕು: ಎಲ್. ಹನುಮಂತಯ್ಯ

 

ಬೆಳಗಾವಿ :
ಸಮಕಾಲೀನ ಸಂದರ್ಭದಲ್ಲಿ ಬಹುತೇಕ ವಿಶ್ವ ವಿದ್ಯಾಲಯಗಳ ಪ್ರಸಾರಾಂಗಗಳು ಜ್ಞಾನ ಪ್ರಸರಣ ಕಾರ್ಯವನ್ನು ಮರೆತು ನಿಷ್ಕ್ರಿಯವಾಗಿವೆ. ಇಂತಹ ಸಂದರ್ಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಸಾರಾಂಗ ಜ್ಞಾನವನ್ನು ಬಿತ್ತರಿಸುವ ಮಹತ್ತರ ಕಾರ್ಯದಲ್ಲಿ ಕ್ರಿಯಾಶೀಲವಾಗುವುದರೊಂದಿಗೆ ಮತ್ತೆ ಗತ ವೈಭವಕ್ಕೆ ಕರೆದೊಯ್ಯುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಹೇಳಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಸಾರಾಂಗ ಮತ್ತು ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಹಯೋಗದಲ್ಲಿ ವಿಶ್ವ ವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹದಿನೆಂಟು ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವ ವಿದ್ಯಾಲಯಗಳಿಗೆ ಜ್ಞಾನದಾಹವಿರಬೇಕು. ಇಲ್ಲಿ ಸದಾ ಜ್ಞಾನವನ್ನು ಬಿತ್ತರಿಸುವ ಕಾರ್ಯ ನಡೆಯಬೇಕು. ಇಲ್ಲಿನ ಜ್ಞಾನ ಕೇವಲ ಪಂಡಿತರಿಗಷ್ಟೇ ಸೀಮಿತವಾಗದೆ ಸಾಮಾನ್ಯರ ಬದುಕಿಗೆ ಹತ್ತಿರವಿರಬೇಕು. ಇಂದು ಸರ್ಕಾರಿ ವಿಶ್ವವಿದ್ಯಾಲಯಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇವು ಎಲ್ಲರ ಸೊತ್ತು. ಆದರೆ, ಮೂಲಸೌಕರ್ಯಗಳ ಕೊರತೆಯಿಂದ ಬಹುತೇಕ ವಿಶ್ವವಿದ್ಯಾಲಯಗಳು ಹೆಸರಿಗಷ್ಟೇ ವಿಶ್ವವಿದ್ಯಾಲಯವಾಗಿದ್ದು ಗುಣಾತ್ಮಕ ಶಿಕ್ಷಣದಿಂದ ದೂರಾಗಿವೆ. ಖಾಸಗಿ ಮಹಾವಿದ್ಯಾಲಯ ಮತ್ತು ವಿಶ್ವವಿದ್ಯಾಲಯಗಳು ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿದ್ದರೂ ಅವು ಉಳ್ಳವರ ಶ್ರೀಮಂತರ ಸೊತ್ತಾಗಿದೆ ಎಂದು ಕಳಕಳಿ ವ್ಯಕ್ತಪಡಿಸಿದರು.
ಸರ್ಕಾರಿ ಶಿಕ್ಷಣ ಸಂಸ್ಥೆಗಳು ಆಮೂಲಾಗ್ರವಾಗಿ ಬದಲಾಗಬೇಕು ಆಗ ಮಾತ್ರ ಸರ್ವರಿಗೂ ಉತ್ತಮ ಶಿಕ್ಷಣ ಸಿಗಲು ಸಾಧ್ಯ ಎಂದರು.

ಪುಸ್ತಕಗಳ ಕುರಿತು ಮಾತನಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ. ಬಸವರಾಜ ಕಲ್ಗುಡಿ, ತಾತ್ತ್ವಿಕ ಚಿಂತನೆ ಮತ್ತು ಸಾಮಾಜಿಕ ಅರಿವು ಮೂಡಿಸುವ ಕೃತಿಗಳು ಪ್ರಕಟವಾಗಬೇಕು. ಇಲ್ಲಿ ಬಿಡುಗಡೆಗೊಂಡ ಎಲ್ಲಾ ಕೃತಿಗಳು ಮೌಲಿಕವಾಗಿವೆ. ಒಂದು ವಿಶ್ವವಿದ್ಯಾನಿಲಯದಲ್ಲಿ ಬೋಧನಾಂಗ, ಸಂಶೋಧನಾಂಗ, ಆಡಳಿತಾತ್ಮಕಾಂಗ, ಪ್ರಸಾರಾಂಗ ಸರಿಯಾಗಿ ಕಾರ್ಯ ನಿರ್ವಹಿಸಿದಲ್ಲಿ ವಿಶ್ವವಿದ್ಯಾಲಯ ಬೌದ್ಧಿಕವಾಗಿ ಬಹಳ ಎತ್ತರಕ್ಕೆ ಬೆಳೆಯುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ, ನಮ್ಮ ವಿಶ್ವವಿದ್ಯಾಲಯದ ಚರಿತ್ರೆಯಲ್ಲಿ ಇದೊಂದು ದಾಖಲಾಗಬಹುದಾದ ಕಾರ್ಯ. ಇಷ್ಟೊಂದು ಪುಸ್ತಕ ಒಂದೇ ಬಾರಿ ಲೋಕಾರ್ಪಣೆಗೊಳ್ಳುವುದು ವಿಶ್ವವಿದ್ಯಾಲಯದ ಘನತೆ ಗೌರವವನ್ನು ಹೆಚ್ಚಿಸಿದೆ. ಪ್ರಸಾರಾಂಗದ ಪ್ರಚಾರೋಪನ್ಯಾಸದಲ್ಲಿ ಮೂಡಿ ಬಂದ ಹದಿಮೂರು ಪುಸ್ತಕಗಳು ಲೋಕಾರ್ಪಣೆಗೊಳ್ಳುವುದು ಅತ್ಯಂತ ಸಂತೋಷದ ಸಂಗತಿ. ಮುಂದೆ ಇನ್ನಷ್ಟು ಕಾರ್ಯ ಪ್ರಸಾರಾಂಗದಿಂದ ಆಗಲಿ. ಇಲ್ಲಿ ಬಿಡುಗಡೆ ಆದ ಪುಸ್ತಕಗಳು ನಾಡಿನ ಶ್ರೇಷ್ಠ ವಿದ್ವಾಂಸರ ಕೃತಿಗಳಾಗಿವೆ. ಇವುಗಳ ಜೊತೆಗೆ ರಾಣಿ ಚನ್ನಮ್ಮ ಅಧ್ಯಯನ ಪೀಠದ ವತಿಯಿಂದಲೂ ಐದು ಸಂಶೋಧನಾಧಾರಿತವಾದ ಪುಸ್ತಕಗಳು ಲೋಕಾರ್ಪಣೆಗೊಂಡಿರುವುದು ಅಧ್ಯಯನ ಪೀಠದ ಕಾರ್ಯಕ್ಷಮತೆಯನ್ನು ಎತ್ತಿ ತೋರಿಸುತ್ತಿದೆ. ಈ ಎರಡು ಕಾರ್ಯಗಳೂ ಸ್ತುತ್ಯರ್ಹವಾದುದು. ಇಂತಹ ಬೌದ್ಧಿಕ ಕಾರ್ಯಚಟುವಟಿಕೆಗಳು ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯಬೇಕು. ಈ ಕಾರ್ಯದಲ್ಲಿ ಹೊರಗಿನ ವಿದ್ವಾಂಸರು ಕೈಜೋಡಿಸಬೇಕೆಂದು ಹೇಳಿದರು.

ಪ್ರಸಾರಾಂಗದ ನಿರ್ದೇಶಕ ಪ್ರೊ. ಎಸ್. ಬಿ. ಆಕಾಶ್ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ನಮ್ಮ ಪ್ರಸಾರಾಂಗದಿಂದ ಹದಿನೆಂಟು ಪುಸ್ತಕಗಳು ಏಕಕಾಲದಲ್ಲಿ ಬಿಡುಗಡೆ ಆಗುತ್ತಿರುವುದು ಇದೇ ಮೊದಲು. ಇದು ಪ್ರಸಾರಾಂಗಕ್ಕೆ ಉತ್ತಮ ಭೂಮಿಕೆಯನ್ನು ಒದಗಿಸಲಿದೆ ಎಂದರು.

ಪುಸ್ತಕದ ಲೇಖಕರನ್ನು ಸನ್ಮಾನಿಸಲಾಯಿತು. ಕುಲಸಚಿವೆ ರಾಜಶ್ರೀ ಜೈನಾಪುರ, ಮೌಲ್ಯ ಮಾಪನ ಕುಲಸಚಿವ ಪ್ರೊ. ಶಿವಾನಂದ ಗೊರನಾಳೆ, ರಾಣಿ ಚನ್ನಮ್ಮ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ಎಸ್. ಎಂ. ಗಂಗಾಧರಯ್ಯ ಉಪಸ್ಥಿತರಿದ್ದರು.

ಸಹಾಯಕ ನಿರ್ದೇಶಕ ಡಾ. ಪಿ. ನಾಗರಾಜ ಸ್ವಾಗತಿಸಿದರು. ಡಾ. ಗಜಾನನ ನಾಯ್ಕ ನಿರೂಪಿಸಿದರು. ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಂಯೋಜಕರಾದ ಡಾ. ಮಹೇಶ ಗಾಜಪ್ಪನವರ್ ವಂದಿಸಿದರು. ವಿದ್ಯಾರ್ಥಿ ಭರತ್ ಗುರವ ಪ್ರಾರ್ಥಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ