LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ.!

 

ಬೆಳಗಾವಿ : ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇ  ಎಂಬ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು 15 ಜನರನ್ನು ಅರೆಸ್ಟ್ ಮಾಡಿದ್ದಾರೆ.

ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ.

ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ ಸಿ.ಟಿ. ರವಿ ಅವರ ಕಾರಿಗೆ ಗುದ್ದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋರಾದ ಗಲಾಟೆ ಶುರುವಾಗುತ್ತಿದ್ದಂತೆ ಪೊಲೀಸರ ಭದ್ರತೆಯಲ್ಲಿ ಸಿ.ಟಿ. ರವಿ ಅವರು ಪರಿಷತ್ತಿನ ಕೋಣೆಯ ಆವರಣದೊಳಗೆ ಹೋಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹಿಂಬಾಲಿಸಿಕೊಂಡು ಹೋಗುವುದನ್ನು ಪೊಲೀಸರು ತಡೆದಿದ್ದಾರೆ. ಮುಂದುವರೆದು ಪೊಲೀಸರು ಸಿ.ಟಿ. ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಸುಮಾರು 15 ಜನರನ್ನು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!