LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ:  -ಹಡಪದ ಅಪ್ಪಣ್ಣ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ರಾಗ ರಚನೆಯ ಬಲ್ಲೆನೆಂಬ ವ್ಯಂಗಿಮನುಜರಿರಾ, ನೀವು ಕೇಳಿ :

ರಾಗವಾವುದು, ರಚನೆಯಾವುದು ಬಲ್ಲರೆ ನೀವು ಹೇಳಿರೊ,

ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ.

ಈ ರಾಗದ್ವೇಷವ ಹಿಡಿದು, ಕೂಗಿಡುವುದೆಲ್ಲವು ರಾಗವೆ?

ವೇದಪುರಾಣಾಗಮಶಾಸ್ತ್ರವನೋದಿ ಕಂಡವರ ಬೋಧಿಸುವದೆಲ್ಲ ರಚನೆಯೆ? ಅಲ್ಲ.

ಇನ್ನು ರಾಗವಾವುದು ಎಂದರೆ,

ಝೇಂಕಾರದ ಪ್ರಣಮದ ನಾದವನರಿಯಬಲ್ಲರೆ ರಾಗ.

ಇನ್ನು ರಚನೆ ಯಾವುದು ಎಂದರೆ,

ಯೋಗಿ, ಜೋಗಿ, ಶ್ರವಣ, ಸನ್ಯಾಸಿ, ಕಾಳಾಮುಖಿ, ಪಾಶುಪತ ಷಡುದರ್ಶನಕ್ಕೆ

ಶ್ರುತವ ತೋರಿ ನುಡಿದು, ದೃಷ್ಟವ ತೋರಿ ನಡೆದು,

ಅಲ್ಲದಿರ್ದರೆ ನೀತಿಯ ತೋರಿ ಮರೆವುದೀಗ ರಚನೆ.

ಇದನರಿಯದೆ ನಾನು ರಾಗ ರಚನೆಯ ಬಲ್ಲೆನೆಂದು ನುಡಿವ

ಮೂಗುಹೋದ ಮೂಕೊರೆಯರ ಮೆಚ್ಚುವನೆ,ನಮ್ಮ ಬಸಪ್ರಿಯ ಕೂಡಲಚೆನ್ನಬಸವಣ್ಣ ?

 

-ಹಡಪದ ಅಪ್ಪಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026