LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವನ ಸರ್ವತೋಮುಖ ಬೆಳವಣಿಗೆಗೆ ವಚನ ಸಾಹಿತ್ಯ ಅಗತ್ಯ .

ಬಳ್ಳಾರಿ: ಮಾನವನ ಸರ್ವತೋಮುಖ ಬೆಳವಣಿಗೆಗೆ ವಚನ ಸಾಹಿತ್ಯ ಅಗತ್ಯ ಎಂದು ಉಪನ್ಯಾಸಕ ಶರಣಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಬಸವೇಶ್ವರ ನಗರದ ರಾಷ್ಟ್ರೀಯ ಬಸವದಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕವು ಏರ್ಪಡಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು 12ನೇ ಶತಮಾನದ ವಚನಗಳು ಸಾಮಾಜಿಕ ಚಳುವಳಿ ಮಾಡಲು ಪ್ರೋತ್ಸಾಹ ನೀಡುತ್ತವೆ. ಸರ್ವಕಾಲಿಕ, ವಚನಗಳು ಅನರ್ಗ್ಯ ರತ್ನಗಳಿದ್ದಂತೆ ಲೋಕದ ಡೊಂಕನ್ನು ತಿದ್ದುವುದರ ಜೊತೆಗೆ ಮನುಷ್ಯನ ಡೊಂಕನ್ನು ತಿದ್ದಲು ಸಹಕಾರಿಯಾಗಿವೆ. ಸೌಜನ್ಯ ,ತಾಳ್ಮೆ ದೊಡ್ಡ ಆಸ್ತಿಗಳು. ತಮ್ಮ ಜೀವನದಲ್ಲಿ ನಿಸ್ವಾರ್ಥ ಮನೋಭಾವಗಳನ್ನು ರೂಢಿಸ್ಕೊಳ್ಳಬೇಕು ಎಂದು ತಮ್ಮ ಉಪನ್ಯಾಸದಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ವಕೀಲರು ಹಾಗೂ ಯೋಗ ಸಾಧಕರಾದ ಶ್ರೀಯುತ ಕಣೆಕಲ್ ಎರ್ರಿಸ್ವಾಮಿ ರವರು ಉದ್ಘಾಟಿಸಿ ತಮ್ಮ ಉದ್ಘಾಟನಾ ನುಡಿಯಲ್ಲಿ ವಚನ ಸಾಹಿತ್ಯಗಳು ಜನರ ಬದುಕನ್ನು ಕಟ್ಟಿಕೊಡುತ್ತವೆ,
ಜೊತೆಗೆ ಸಮಾಜಿಕ ಕಳಕಳಿ, ಸಾಮಾಜಿಕ ಚಿಂತನೆಯನ್ನು ಮಾಡುವಲ್ಲಿ ಸಹಕಾರಿಯಾಗುತ್ತವೆ ಎಂದು ನುಡಿದರು

ರಾಷ್ಟ್ರೀಯ ಬಸವದಳದ ರಾಜ್ಯ  ಉಪಾಧ್ಯಕ್ಷರಾದ    ಕೆ ವಿ ರವಿಶಂಕರ್ ಮಾತನಾಡಿ      ಬಸವಣ್ಣನವರ ಅನುಭವ ಮಂಟಪದಲ್ಲಿ ಚರ್ಚೆಯಾಗುತ್ತಿದ್ದ ವಿಷಯಗಳು    ಇಂದಿನ ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದರು.
ಉಪಸ್ಥಿತರಿದ್ದರು ಜಿಲನ್ ಬಾಷಾ, ತಾಲೂಕು ಘಟಕದ ಅಧ್ಯಕ್ಷರಾದ ನಾಗರೆಡ್ಡಿ ಕೆ ವಿ , ಅಖಂಡ ಬಳ್ಳಾರಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾಕ್ಟರ್ ನಿಷ್ಟಿ ರುದ್ರಪ್ಪ ರವರು ಪ್ರಾಸ್ತಾವಿಕ ನುಡಿದರು.

ಮುಖ್ಯ ಅತಿಥಿಗಳಾಗಿ  ವರದಿಗಾರರಾದ ಎಸ್ ಕಿನ್ನೂರೇಶ್ವ
ಪರಿಷತ್ತಿನ ಅಧ್ಯಕ್ಷರಾದ ಎಚ್ ಹಂಪನ ಗೌಡ್ರು
ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಎನ್ ಡಿ ವೆಂಕಮ್ಮ, ಅಜಯ್ ಬಣಕಾರ್, ಅಬ್ದುಲ್ ಐ, ಪ್ರಭು ಸರ್, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ತಿನ ಸದಸ್ಯರು, ಸಾಹಿತ್ಯ ಅಭಿಮಾನಿಗಳು ಉಪಸ್ಥಿತರಿದ್ದರು. ಅತಿಥಿಗಳಿಗೆ ಮತ್ತು ಉಪನ್ಯಾಸ ನೀಡಿದ ಶರಣಪ್ಪ ರವರಿಗೆ ಗೌರವಿಸಲಾಯಿತು. ಚಾಂದ್ ಪಾಷಾ ತಾಲೂಕು ಅಧ್ಯಕ್ಷರಾದ ನಾಗರೆಡ್ಡಿ ಕೆ ವಿ ಉಪಸ್ಥಿತರಿದ್ದರು..​
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು