LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಳುವರಿ ಕುಂಠಿತ,ಗಗನಕ್ಕೇರಿದ ತರಕಾರಿ ಬೆಲೆ 

ಕವಿತಾಳ: ಮಾರುಕಟ್ಟೆಯಲ್ಲಿ ತರಕಾರಿ ದರ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತರಕಾರಿ ಕೊಳ್ಳಲು ಯೋಚಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಹೌದು! ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿರುವುದರಿಂದ ಮಾರುಕಟ್ಟೆಗೆ ಬರುವ ತರಕಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹೆಚ್ಚಾದ ಮಳೆಯಿಂದಾಗಿ ತರಕಾರಿ ಕೊಳೆತು, ಇಳುವರಿ ಕಡಿಮೆಯಾಗುತ್ತಿದೆ. ಇದರಿಂದಾಗಿ ಉತ್ಪಾದನೆ ಕುಂಠಿತವಾಗಿದೆ. ವಾರದಿಂದ ವಾರಕ್ಕೆ ತರಕಾರಿ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ.


ತಿಂಗಳ ಹಿಂದೆ 1ಕೆ.ಜಿ. ಟೊಮ್ಯಾಟೋ 20 ರಿಂದ 30 ರೂ.ಗೆ ಮಾರಾಟವಾಗಿತ್ತು. ಈಗ ಪ್ರತಿ ಕೆಜಿ ರೂ.100 ಗೆ ಮಾರಾಟವಾಗುತ್ತಿದೆ. ಅದೇ ರೀತಿ ಬೀನ್ಸ್ ರೂ.200, ಆಲೂಗಡ್ಡೆ ರೂ.80, ಹಿರೇಕಾಯಿ ರೂ100, ಸೌತೆಕಾಯಿ ರೂ.100, ಬೆಂಡೆಕಾಯಿ ರೂ.80, ಬದನೆಕಾಯಿ 80, ಕೊತ್ತಂಬರಿ,ಮೆಂತೆ, ಪುಂಡಿ ಪಲ್ಯ,ಪಾಲಕ್ ರೂ.10 ಗೆ ಒಂದು ಕಟ್ಟು ಮಾರಾಟವಾಗುತ್ತಿದೆ.


ಬೇರೆ ಜಿಲ್ಲೆಗಳಿಂದ ಮಾರುಕಟ್ಟೆಗೆ ಬರುತ್ತಿದ್ದ ತರಕಾರಿ ಕಳೆದೆರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ. ಸ್ಥಳೀಯ ಜಮೀನಿನಲ್ಲಿ ಬೆಳೆದ ತರಕಾರಿಗಳು ಸದ್ಯಕ್ಕೆ ಬಂದಿಲ್ಲ. ಹೀಗಾಗಿ ಅಲ್ಪ ಪ್ರಮಾಣದಲ್ಲಿ ತರಕಾರಿ ಮಾರುಕಟ್ಟೆಗೆ ಬರುವುದರಿಂದ ಬೆಲೆಯಲ್ಲಿ ಬಾರೀ ವ್ಯತ್ಯಾಸವಾಗಿದೆ.


ತರಕಾರಿ ಬೆಲೆಗಳು ಗಗನಕ್ಕೇರಿದ್ದು, ಬಡವರು ಖರೀದಿಸಲಾಗದಂತಹ ಪರಿಸ್ಥಿತಿ ಇದೆ. ದುಡಿಯೋ ಹಣ ತರಕಾರಿ ಖರೀದಿಗೂ ಸಾಲುತ್ತಿಲ್ಲ. ವಾರದ ಸಂತೆಯಲ್ಲಿ ರೂ.200 ರಿಂದ 300 ರಲ್ಲಿ ತರಕಾರಿ ಖರೀದಿ ಮಾಡುತ್ತಿದ್ದೆವು. ಈಗ ರೂ.600 ಆದರೂ ಸಾಲುತ್ತಿಲ್ಲ ಎಂದು ಸ್ಥಳೀಯರಾದ ಸಂಗಮೇಶ ಸಾಲ್ಮನಿ ಹೇಳಿದರು.


ಸ್ಥಳೀಯ ಜಮೀನುಗಳಲ್ಲಿ ಬೆಳೆದ 

ತರಕಾರಿ ಬರುವರೆಗೂ,ತರಕಾರಿ ದರ ಇಳಿಕೆಯಾಗುವ ಲಕ್ಷಣ ಇಲ್ಲ.

ಅನಿವಾರ್ಯವಾಗಿ ನಾವು ಬೇರೆ ಜಿಲ್ಲೆಗಳಿಂದ ತರಕಾರಿಗಳನ್ನು ತರಿಸಿ ಮಾರಾಟ ಮಾಡುತ್ತಿದ್ದೇವೆ. ಬೆಲೆ ಏರಿಕೆಯ ಜೊತೆಗೆ ಉತ್ತಮ ಗುಣಮಟ್ಟದ ತರಕಾರಿಗಳು ಸಿಗುತ್ತಿಲ್ಲ ಎಂದು ತರಕಾರಿ ವ್ಯಾಪಾರಿ ವೀರೇಶ್ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು