Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತ

ಬೆಳಗಾವಿ : ಹನ್ನೆರಡನೆಯ ಶತಮಾನದ ಶರಣರ ವಚನಗಳು ಸಮಾಜಕ್ಕೆ ನೈತಿಕ ಶಿಕ್ಷಣವನ್ನು ನೀಡುತ್ತವೆ. ಮನದ ಕಲ್ಮಶವನ್ನು ನಿವಾರಿಸಿ ಜ್ಞಾನವನ್ನು ಸ್ಫುರಿಸುವಲ್ಲಿ ವಚನಗಳ ಕೊಡುಗೆ ಅನನ್ಯವಾಗಿದೆ ಎಂದು ಸಾಹಿತಿ, ಇಂಗ್ಲೀಷ್ ಪ್ರಾಧ್ಯಾಪಕಿ ಪ್ರೊ. ಜಯಶ್ರೀ ಅಬ್ಬಿಗೇರಿ ಹೇಳಿದರು.  ಶಿವಬಸವನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಮ್ಮಿಕೊಂಡಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ವಚನಗಳಲ್ಲಿ ವ್ಯಕ್ತಿತ್ವ ವಿಕಸನ ಪರಿಕಲ್ಪನೆ ವಿಷಯ ಕುರಿತು ಮಾತನಾಡಿದರು.  

ಶರಣರ ವಚನಗಳಲ್ಲಿ ಜೀವನ ಮೌಲ್ಯ ಅಡಗಿದೆ. ಅತ್ಯಂತ ಸರಳವಾಗಿ ಬದುಕಿನ ಸೂತ್ರಗಳನ್ನು ಸೂತ್ರಿಕರಿಸಿದವರು ಶರಣರು. ಬಸವಣ್ಣನವರ ಕಳಬೇಡ ಕೊಲಬೇಡ ಹುಸಿಯನುಡಿಯಲು ಬೇಡ ವಚನ ಮಾನವನ ಸುಂದರ ಬದುಕಿಗೆ ಬಹುದೊಡ್ಡ ವ್ಯಾಖ್ಯಾನವಾಗಿದೆ. ನಮ್ಮ ಅಂತರಂಗ ಶುದ್ಧಿ ಹಾಗೂ ಬಹಿರಂಗ ಶುದ್ಧಿಗೆ ಇನ್ನೇನು ಬೇಕು. ಒತ್ತಡದ ಬದುಕಿನಲ್ಲಿ ನಡೆಯುತ್ತಿರುವ ನಮಗೆ ಮಾನಸಿಕ ನೆಮ್ಮದಿಯನ್ನು ಕಳೆದುಕೊಂಡಿದ್ದೇವೆ. ಸಂಯಮವನ್ನು ಕಳೆದುಕೊಂಡು ಬದುವಂತಾಗಿರುವ ಈ ಸಮಯದಲ್ಲಿ ಸಮಾಧಾನ, ವ್ಯವಧಾನ, ಅವಧಾನಗಳನ್ನು ಅತ್ಯಂತ ಮಾರ್ಮಿಕವಾಗಿ ಶರಣರು ತಿಳಿಸಿಕೊಟ್ಟಿದ್ದಾರೆ. ಅವರು ಹೇಳಿರುವ ಕಾಯಕ ದಾಸೋಹ ಪ್ರಸಾದ ಸೂತ್ರಗಳು ಜೀವನಕ್ಕೆ ಅಡಿಪಾಯವಾಗಿವೆ. ಕರ್ಮ ಸಿದ್ಧಾಂತವನ್ನು ಅವರು ಹೇಳಿದ ರೀತಿ ನಮ್ಮ ಜೀವನಕ್ಕೆ ಸೋಪಾನವಾಗಿದೆ. ವಚನಗಳನ್ನು ಅಧ್ಯಯನಿಸಿ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳ ಮೂಲಕ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಮಾತನಾಡಿ, ಶರಣರ ವಚನಗಳಲ್ಲಿ ಎಲ್ಲವೂ ಅಡಗಿದೆ. ನಿಜವಾದ ಜೀವನದರ್ಶನವನ್ನು ಅಲ್ಲಿ ಕಾಣಬಹುದು. ಅವು ಅನುಭಾವದ ಮಹಾಬೆಳಕಾಗಿವೆ. ನುಡಿದಂತೆ ನಡೆದವರು ಶರಣರು. ನಮ್ಮ ನಡೆ ನುಡಿ ಶುದ್ಧವಾಗಿದ್ದರೆ ಬದುಕು ಸುಂದರಗೊಳ್ಳುತ್ತದೆ. ಮಹಾಸಭೆಯು ಇಂತಹ ರಚನಾತ್ಮಕವಾದ ಉಪನ್ಯಾಸಗಳನ್ನು ಸಂಯೋಜಿಸಿ ಸಮಾಜವನ್ನು ಸಂಘಟಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಕಾರಂಜಿಮಠದ ಶ್ರೀ ಗುರುಸಿಧದ ಸ್ವಾಮೀಜಿ ಆಶೀರ್ವಚನ ನೀಡಿ, ಮನೋಕ್ಲೇಶನಗಳನ್ನು ನಿವಾರಿಸುವ ಶಕ್ತಿ ವಚನಗಳಲ್ಲಿ ಅಡಗಿದೆ. ಅವು ಕನ್ನಡದ ಉಪನಿಷತ್ತುಗಳು. ಇಂದು ಜೀವನ ಬಹಳ ಸಂಕುಚಿತಗೊಳ್ಳುತ್ತಿದೆ. ಹತ್ತು ಹಲವಾರು ಜಂಜಡಗಳಲ್ಲಿ ಕಾಲವನ್ನು ಕಳೆಯುತ್ತಿದ್ದೇವೆ. ಅವೆಲ್ಲವುಗಳಿಗೆ ಉತ್ತರವೆಂಬಂತೆ ಇರುವ ವಚನಗಳು ನಮಗೆ ಮನೋಔಷಧಿಯಾಗಿವೆ. ಪ್ರಾಂಜಲ ಮನಸ್ಸಿನಿಂದ ಅವುಗಳನ್ನು ಓದುವಂತಾಗಬೇಕು. ಯುವ ಜನಾಂಗವು ಈ ಎಡೆಗೆ ಹೊರಳಬೇಕು. ಮಹಾಸಭೆಯ ಕಾರ್ಯ ಸ್ತುತ್ಯಾರ್ಹವೆಂದು ನುಡಿದರು.

 
ವಚನೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಿದ ಜೆಎನ್‌ಎಂಸಿ ಸಹಪ್ರಾಧ್ಯಾಪಕ ಡಾ.ಅವಿನಾಶ ಕವಿಯವರನ್ನು ಸನ್ಮಾನಿಸಲಾಯಿತು.
ಮಹಾದೇವಿ ಪಾಟೀಲ ವಚನ ಪ್ರಾರ್ಥನೆ ಮಾಡಿದರು. ಸೋಮಲಿಂಗ ಮಾವಿನಕಟ್ಟಿ, ಸೋಮಲಿಂಗ ಮಾವಿನಕಟ್ಟಿ, ಪಾರ್ವತಿ ತುಪ್ಪದ ಪರಿಚಯಿಸಿದರು. ಸವಿತಾ ವಿರೂಪಾಕ್ಷಿ ವಚನ ವಿಶ್ಲೇಷಣೆ ಮಾಡಿದರು. ಮಹಾದೇವಿ ಅಜವಾನ ನಿರೂಪಿಸಿದರು. ಆರ್‌.ಪಿ.ಪಾಟೀಲ ವಂದಿಸಿದರು. ಎ.ಬಿ.ಮಡಿವಾಳರ ದಾಸೋಹ ಸೇವೆಗೈದರು. ಡಾ.ಎಚ್‌.ಬಿ.ರಾಜಶೇಕರ, ಪ್ರಸಾದ ಹಿರೇಮಠ, ಬಾಲಚಂದ್ರ ಬಾಗಿ, ವೈ.ಬಿ.ಮೆಣಸಿನಕಾಯಿ, ವಿ.ಕೆ.ಪಾಟೀಲ, ವಿದ್ಯಾ ಹುಂಡೇಕರ, ಸರೋಜನಿ ನಿಶಾನದಾರ, ಜ್ಯೋತಿ ಬಾದಾಮಿ, ಡಾ.ಗುರುದೇವಿ ಹುಲೆಪ್ಪನವರಮಠ, ಶೈಲಜಾ ಭಿಂಗೆ, ಶೈಲಜಾ ಸಂಸುದ್ದಿ ಮೊದಲಾದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ