Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಭಾರೀ ಮುಖಭಂಗ ; ಸುವೇಂದು ಅಧಿಕಾರಿ ವಿರುದ್ಧ ದೊಡ್ಡ ಅಂತರದಲ್ಲಿ ಸೋಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಮಮತಾ ಬ್ಯಾನರ್ಜಿ ಅವರು ಅತ್ಯಂತ ದೊಡ್ಡರಾಜಕೀಯ ಸೋಲನ್ನು ಅನುಭವಿಸಿದ್ದಾರೆ. ಹೈಪ್ರೊಫೈಲ್ ಕ್ಷೇತ್ರವೆಂದೇ ಗುರುತಿಸಲ್ಪಟ್ಟಿದ್ದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸುಮಾರು 15,105 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿದ್ದ ಭವಾನಿಪುರದಲ್ಲಿ ಎದುರಾದ ಈ ಸೋಲು, ತೃಣಮೂಲ ಕಾಂಗ್ರೆಸ್‌ಗೆ (TMC) ನೀಡಿದ ದೊಡ್ಡ ಹಿನ್ನಡೆಯಾಗಿದೆ.

ಒಮ್ಮೆ ಸುವೆಂದು ಒಮ್ಮೆ ಮಮತಾ ಮುನ್ನಡೆ ಸಾಧಿಸುತ್ತ ಹಾವು ಏಣಿಯಾಟ ನಡೆದಿದ್ದ ಈ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ 17ನೇ ಸುತ್ತಿನಿಂದ ಲೀಡ್‌ ಪಡೆಯುತ್ತ ಹೋಗಿದ್ದಾರೆ. ಒಟ್ಟು 20 ಸುತ್ತುಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಅಂತಿಮವಾಗಿ ಬಿಜೆಪಿಯ ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದರೆ ಮಮತಾ ಬ್ಯಾನರ್ಜಿ (ಟಿಎಂಸಿ) 58,812 ಮತಗಳನ್ನು ಪಡೆದಿದ್ದು, 15,105 ಮತಗಳ ಅಂತರದಿಂದ ಮಮತಾ ಸೋತಿದ್ದಾರೆ.

ಅಂತಿಮ ಸುತ್ತಿನ ಎಣಿಕೆಯ ನಂತರ ಸುವೇಂದು ಅಧಿಕಾರಿ ಅವರು ಸ್ಪಷ್ಟ ಬಹುಮತದೊಂದಿಗೆ ವಿಜಯಶಾಲಿಯಾಗಿ ಹೊರಹೊಮ್ಮಿದ್ದು, ಬಂಗಾಳದ ರಾಜಕಾರಣದಲ್ಲಿ ಬಿಜೆಪಿಯ ಈ ಸಾಧನೆಯು ಐತಿಹಾಸಿಕ ಮೈಲಿಗಲ್ಲಾಗಿದೆ.

ನಂದಿಗ್ರಾಮ ಇತಿಹಾಸ ಮರುಕಳಿಸಿತೇ?

2021ರ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ನಡೆದಿದ್ದ ತೀವ್ರ ಹಣಾಹಣಿಯಲ್ಲಿ ಸುವೇಂದು ಅವರು ಮಮತಾ ಬ್ಯಾನರ್ಜಿ ಅವರನ್ನು 1,956 ಮತಗಳ ಅಂತರದಿಂದ ಸೋಲಿಸಿದ್ದರು. ಈಗ 2026ರಲ್ಲಿಯೂ ಸಹ ಮಮತಾ ಅವರನ್ನು ಸೋಲಿಸುವ ಮೂಲಕ ಸುವೇಂದು ಅಧಿಕಾರಿ ಅವರು ತಮ್ಮ ಮೇಲುಗೈಯನ್ನು ಸಾಬೀತುಪಡಿಸಿದ್ದಾರೆ. ಆದರೆ ಈ ಬಾರಿ ಮಮತಾ ಅವರ ಕ್ಷೇತ್ರದಲ್ಲೇ ಅವರನ್ನು 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

ಭವಾನಿಪುರ ಕ್ಷೇತ್ರವು ಇಡೀ ದೇಶದ ಗಮನ ಸೆಳೆದಿತ್ತು. ಬಿಜೆಪಿ ವರಿಷ್ಠರು ರೂಪಿಸಿದ ತಂತ್ರಗಾರಿಕೆ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸ್ವಂತ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರು ಸೋಲನುಭವಿಸಿರುವುದು ಬಂಗಾಳದ ರಾಜಕೀಯ ಚಿತ್ರಣವನ್ನು ಬದಲಿಸುವ ಮುನ್ಸೂಚನೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ