LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ನಿವೃತ್ತಿ ಘೋಷಣೆ

ಮುಂಬೈ : ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಇಂಟರ್​ನ್ಯಾಷನಲ್ ಕೆರಿಯರ್​ಗೆ ವಿದಾಯ ಹೇಳುವುದಾಗಿ 37 ವರ್ಷದ ರಸೆಲ್ ತಿಳಿಸಿದ್ದಾರೆ.

2026 ರ ಟಿ20 ವಿಶ್ವಕಪ್​ಗೂ ಮುನ್ನ ನಿವೃತ್ತಿ ನೀಡಲು ನಿರ್ಧರಿಸಿದ್ದು, ಅದರಂತೆ ಜಮೈಕಾದ ಸಬೀನಾ ಪಾರ್ಕ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರಸೆಲ್ ತಿಳಿಸಿದ್ದಾರೆ. ಸಬೀನಾ ಪಾರ್ಕ್ ರಸೆಲ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಲು ಅವರು ಬಯಸಿದ್ದಾರೆ.

2011 ರಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್​ ಪರ ಟಿ20 ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ 84 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 73 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 3 ಅರ್ಧಶತಕಗೊಂದಿಗೆ 1078 ರನ್ ಕಲೆಹಾಕಿದ್ದಾರೆ. ಬೌಲಿಂಗ್​ನಲ್ಲಿ 61 ವಿಕೆಟ್ ಕಬಳಿಸಿದ್ದಾರೆ. 2011 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ ಆಡಿರುವುದು 56 ಪಂದ್ಯಗಳನ್ನು ಮಾತ್ರ. ಈ ವೇಳೆ 4 ಅರ್ಧಶತಕಗಳೊಂದಿಗೆ 1034 ರನ್ ಕಲೆಹಾಕಿದ್ದಾರೆ. ಇನ್ನು 55 ಏಕದಿನ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 70 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026