LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ತ ಮಹಿಳೆ ಕಣ್ತೆರೆದಾಗ

ಭದ್ರಾವತಿ, ,ಫೆ. 24 :  ಚಿಕಿತ್ಸೆಗೆಂದು ಶಿವಮೊಗ್ಗಾದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಮಹಿಳೆಯೋರ್ವರು ಸೋಮವಾರ ರಾತ್ರಿ ನಿಧನರಾಗರೆಂದು ವೈದ್ಯರು ದೃಢೀಕರಿಸಿದ್ದಾರೆ. ಮಂಗಳವಾರ ಬೆಳಗ್ಗೆ ಅವರ ನಿವಾಸಕ್ಕೆ ದೇಹವನ್ನು ತಂದು ಇಳಿಸುವಾಗ ಕಣ್ತೆರೆದು ಉಸಿರಾಡಿದ ವಿಸ್ಮಯ ಘಟನೆಯು ಗಾಂಧಿ ನಗರದಲ್ಲಿ ನಡೆದಿದೆ.

ಗಾಂಧಿ ನಗರದ ವಾಸಿ ಹೆಸರಾಂತ ಸಿವಿಲ್ ಕಂಟ್ರಾಕ್ಟರ್ ಸುಬ್ರಮಣಿ ಎಂಬುವರ ಪತ್ನಿ ಮೀನಾಕ್ಷಿ (52 ) ಅವರನ್ನು ಅನಾರೋಗ್ಯ ನಿಮಿತ್ತ ಶಿವಮೊಗ್ಗಾದ ನಾರಾಯಣ ಹೃದಯಾಲಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 11.30 ಕ್ಕೆ ಮೀನಾಕ್ಷಿ ಅವರು ನಿಧನರಾದರೆಂದು ವೈದ್ಯರು ದೃಡಪಡಿಸಿದ್ದರು.

ವಿಷಯ ತಿಳಿದ ಅವರ ಬಂಧು ಬಳಗ ಸೇರಿದಂತೆ ನೂರಾರು ಮಂದಿ ಅವರ ನಿವಾಸದ ಬಳಿ ನೆರೆದಿದ್ದರು. ಮಂಗಳವಾರ ಬೆಳಗ್ಗೆ ಪಾರ್ಥೀವ ಶರೀರವನ್ನು ಗಾಂಧಿನಗರದ ನಿವಾಸಕ್ಕೆ ತಂದು ಇಳಿಸುವಾಗ ಮೃತರಾಗಿದ್ದವರು ಕಣ್ತೆರೆದು ನೋಡಿ ಉಸಿರಾಡಿದ್ದಾರೆ. ಕುಟುಂಬಸ್ಥರು ಅಚ್ಚರಿಗೊಂಡು ನೀರು ಕುಡಿಸಿದ್ದಾರೆ.

ತಕ್ಷಣವೇ ಸಮೀಪದ ಭದ್ರಾ ನರ್ಸಿಂಗ್ ಹೋಂಗೆ ಹೋಗಿ ಪರೀಕ್ಷಿಸಿಕೊಂಡು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಾದ ಮಲ್ನಾಡ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಯಾರಾದರೂ ಮಾತನಾಡಿದರೆ ಉತ್ತರಿಸುತ್ತಾರೆಂದು ಕುಟುಂಬ ಮೂಲಗಳು ತಿಳಿಸಿವೆ. ನೆರೆದಿದ್ದ ನೂರಾರು ಮಂದಿ ಪುಷ್ಪ ಹಾರಗಳನ್ನು ಹಿಂದಕ್ಕೆ ತರುತ್ತಾ ಭಗವಂತ ಅವರಿಗೆ ಮತ್ತಷ್ಟು ಆಯಸ್ಸು ಕೊಡಲಿ ಎಂದು ಪ್ರಾರ್ಥಿಸುತ್ತಿದ್ದರು. ಮುಖಂಡರಾದ ವಿ.ಕದಿರೇಶ್, ಆರ್.ಕರಣಾಮೂರ್ತಿ, ಮಂಜುನಾಥ್, ಸ್ವಾಮಿನಾಥನ್, ವಿದ್ಯಾಧರನ್, ಸೋಮಸುಂದರ್ ಮುಂತಾದವರಿದ್ದರು.

ವೀರಶೈವ ಸಮಾಜದ ಶುಭ ಕಾಮನೆಗಳು:
ಭದ್ರಾ ನದಿ ತೀರದಲ್ಲಿ ಪ್ರತಿವರ್ಷ ಶಿವರಾತ್ರಿ ಹಬ್ಬದ ಮನ್ನಾ ದಿನದಂದು ಲೋಕ ಕಲ್ಯಾಣಾರ್ಥ ಹಮ್ಮಿಕೊಳ್ಳುವ ಹೋಮ ಹವನ ಮತ್ತಿತರೆ ವಿಶೇಷ ಪೂಜೆಗೆ ಸಿವಿಲ್ ಕಂಟ್ರಾಕ್ಟರ್ ಸುಬ್ರಮಣಿ ದಂಪತಿಗಳು ಹೋಮಕ್ಕೆ ಅವರ ಸಕುಟುಂಬ ಸದಸ್ಯರು ಕೂರುತ್ತಿದ್ದರು. ಇಂದು ಮಹಾ ಶಿವರಾತ್ರಿಯ ಮನ್ನಾ ದಿನ ಮಂಗಳವಾರವೂ ಅವರೇ ಹೋಮಕ್ಕೆ ಕೂರಬೇಕಾಗಿತ್ತು. ಆದರೆ ವಿಧಿಯಾಟ ಸೋಮವಾರ ರಾತ್ರಿ ಮರಣ ಹೊಂದಿದರೆಂದು ತಿಳಿದು ವೀರಶೈವ ಸೇವಾ ಸಮಾಜಕ್ಕೆ ದು:ಖವಾಗಿತ್ತು. ವೀರಶೈವ ಸಮಾಜದ ಅಧ್ಯಕ್ಷ ಆರ್.ಮಹೇಶ್‌ಕುಮಾರ್ ಮುಖಂಡರಾದ ವಾಗೀಶ್‌ಕೋಠಿ, ಟಿ.ಎಸ್.ಆನಂದಕುಮಾರ್ ಮುಂತಾದವರು ಬೃಹತ್ ಹಾರವನ್ನು ಹೊತ್ತು ಮೃತರ ನಿವಾಸಕ್ಕೆ ತೆರಳಿದರು. ಆಗತಾನೆ ವಾಹನದಲ್ಲಿ ದೇಹವನ್ನು ತಂದು ಇಳಿಸಿದಾಗ ಕಣ್ತೆರದು ಉಸಿರಾಡಿದನ್ನು ಕಣ್ಣಾರೆ ಕಂಡು ಆಶ್ಚರ್ಯ ಚಿಕಿತರಾಗಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST