LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿ ಬಂದಾಗ ದೇವರು ಧರ್ಮವನ್ನು ಮರೆಯದಿರಿ : ಶ್ರೀ ರಂಭಾಪುರಿ ಜಗದ್ಗುರುಗಳು

 ಜೂನ್-20:
ಮನುಷ್ಯನಿಗೆ ಬರುವ ಸಿರಿ ಸಂಪತ್ತು ಶಾಶ್ವತವಲ್ಲ. ಆಧ್ಯಾತ್ಮ ಜ್ಞಾನವೊಂದೇ ನಿಜವಾದ ಸಂಪತ್ತು. ಸಿರಿ ಬಂದಾಗ ದೇವರು ಮತ್ತು ಧರ್ಮವನ್ನು ಮರೆಯಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ತಾಲೂಕಿನ ಸುಸಲಾದಿ ಗ್ರಾಮದಲ್ಲಿ ನಿರ್ಮಿಸಿದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಉದ್ಘಾಟನೆ ಲಿಂಗ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಅಂಗವಾಗಿ ಜರುಗಿದ ಜನಜಾಗೃತಿ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ದೇವರು ಕೊಟ್ಟ ಕೊಡುಗೆ ಬೇರಾರು ಕೊಡಲು ಸಾಧ್ಯವಿಲ್ಲ. ನಿಂತ ನೆಲ, ಕುಡಿಯುವ ನೀರು, ಬೀಸುವ ಗಾಳಿ ದೇವರು ಕೊಟ್ಟ ಅಮೂಲ್ಯ ವರ. ಉದಾತ್ತ ಮಾನವ ಜೀವನದಲ್ಲಿ ಒಂದಿಷ್ಟಾದರೂ ಶಿವಜ್ಞಾನ ಸಂಪಾದಿಸಿಕೊಳ್ಳದಿದ್ದರೆ ಮತ್ತು ಗುರು ಕಾರುಣ್ಯ ಪಡೆಯದೇ ಹೋದರೆ ಜೀವನ ವ್ಯರ್ಥವಾಗುತ್ತದೆ. ದೇವರ ಮೇಲಿನ ನಂಬಿಗೆ ಮತ್ತು ವಿಶ್ವಾಸವನ್ನು ಎಂದಿಗೂ ಕಳೆದುಕೊಳ್ಳಬಾರದು. ಜೀವನದ ವಿಕಾಸಕ್ಕೆ ತಂದ ನೀತಿ ನಿಯತ್ತುಗಳ ಪರಿಪಾಲನೆಯೇ ನಿಜವಾದ ಧರ್ಮ. ಮಾನವ ಜೀವನದ ಶ್ರೇಯಸ್ಸಿಗಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯರು ದಶವಿಧ ಸೂತ್ರಗಳನ್ನು ಬೋಧಿಸಿದ್ದಾರೆ. ಶರಣರು ಸಪ್ತ ಸೂತ್ರಗಳನ್ನು ಹೇಳಿದ್ದಾರೆ. ದೇವರು ಮತ್ತು ಧರ್ಮವನ್ನು ತೋರಿಸುವಾತನೇ ನಿಜವಾದ ಗುರು. ಪರಶಿವನ ಸಾಕಾರ ಇನ್ನೊಂದು ರೂಪವೇ ಗುರು. ಅಜ್ಞಾನ ಕಳೆದು ಜ್ಞಾನ ಜ್ಯೋತಿ ಬೆಳಗಿಸುವ ಶಕ್ತಿ ಶ್ರೀ ಗುರುವಿಗೆ ಇದೆ. ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಸುಂದರವಾಗಿ ಕಟ್ಟಿ ಇಂದು ಉದ್ಘಾಟನೆ ಲಿಂಗ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಧರ್ಮ ದೀಪೋತ್ಸವ ಸಂಯೋಜಿಸಿರುವುದು ತಮಗೆ ಅತ್ಯಂತ ಸಂತೋಷವನ್ನು ಉಂಟು ಮಾಡಿದೆ ಎಂದರು.
ಆಲಮೇಲ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ ಮನುಷ್ಯ ಯಂತ್ರದoತೆ ದುಡಿದರೂ ಮನಸ್ಸಿಗೆ ಶಾಂತಿಯಿಲ್ಲ. ಬೆಳೆಯುವ ಮಕ್ಕಳಿಗೆ ಭೌತಿಕ ಶಿಕ್ಷಣದ ಜೊತೆಗೆ ಸಂಸ್ಕಾರ ಕೊಡುವ ಕೆಲಸ ಮಾಡಬೇಕಾಗಿದೆ. ಸುಸಲಾದಿ ಗ್ರಾಮದ ಬಹು ದಿನಗಳ ಸಂಕಲ್ಪ ಶ್ರೀ ರಂಭಾಪುರಿ ಜಗದ್ಗುರುಗಳ ಶುಭಾಗಮನದೊಂದಿಗೆ ಪೂರ್ಣಗೊಂಡಿದೆ. ಆಗಾಗ ಇಂಥ ಧರ್ಮ ಕಾರ್ಯಗಳು ನಡೆದುಕೊಂಡು ಬರಬೇಕೆಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಜಯ ಮತ್ತು ಚನ್ನಪ್ಪ ಅವರು ಮಾತನಾಡಿ ವೀರಶೈವ ಧರ್ಮ ಮತ್ತು ಗುರು ಪರಂಪರೆ ಎಂದಿಗೂ ಮರೆಯಬಾರದೆಂದರು. ತಡವಲಗಾ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಜಗಜೇವಣಿ ಮುಪ್ಪಿನಾರ್ಯ ಶಿವಾಚಾರ್ಯರು, ಹಾಗೂ ಗುಡ್ಡಾಪುರದ ಗುರಪಾದೇಶ್ವರ ಶಿವಾಚಾರ್ಯರು ಉಪಸ್ಥಿತರಿದ್ದರು. ಶಾಸಕ ಗೋಪಿಚಂದ ಪಡೋಳಕರ, ಡಾ.ರವೀಂದ್ರ ಅರಳಿ, ಎಮ್.ಆರ್.ಪಾಟೀಲ, ಚನ್ನಪ್ಪಾ ಹೊರ್ತಿಕರ, ಉಮದಿ ಬಸವರಾಜ ಹಿರೇಮಠ ಅವರನ್ನು ಮೊದಲ್ಗೊಂಡು ಹಲವಾರು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು.
ಪ್ರಾತ:ಕಾಲದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಉದ್ಘಾಟಿಸಿ ಲಿಂಗ ಪ್ರತಿಷ್ಠಾಪನೆ ಮತ್ತು ಕಳಸಾರೋಹಣವನ್ನು ಶ್ರೀ ರಂಭಾಪುರಿ ಜಗದ್ಗುರುಗಳು ನೆರವೇರಿಸಿದರು. ಸಮಾರಂಭದ ಹಿಂದಿನ ದಿನ ಸಂಜೆ ಸುಸಲಾದಿ ಗ್ರಾಮದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ ಸಂಭ್ರಮದ ಅಡ್ಡಪಲ್ಲಕ್ಕಿ ಮಹೋತ್ಸವ ಭಕ್ತ ಸಮುದಾಯದ ಮಧ್ಯೆ ವಿಜೃಂಭಣೆಯಿAದ ಜರುಗಿತು. ದೇವಸ್ಥಾನ ಉದ್ಘಾಟನೆ ನಿಮಿತ್ಯ 5 ದಿನಗಳ ಕಾಲ ಜೇರಟಗಿಯ ವೇ.ಮಡಿವಾಳೇಶ್ವರ ಶಾಸ್ತಿçಗಳಿಂದ ಆಧ್ಯಾತ್ಮಿಕ ಪ್ರವಚನ ಜರುಗಿತು. ಆಗಮಿಸಿದ ಸಕಲ ಸದ್ಭಕ್ತರಿಗೂ ಅನ್ನ ದಾಸೋಹ ಜರುಗಿತು.
ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ, ಬಾಳೆಹೊನ್ನೂರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು