ಕಾಡುಗೊಲ್ಲ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು, ವಾರ್ಷಿಕ ವರಮಾನ ರೂ.3.50 ಲಕ್ಷದ ಒಳಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು. ವಿದೇಶಿ ವ್ಯಾಸಂಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವಾರ್ಷಿಕ ವರಮಾನವು ರೂ 8.00 ಲಕ್ಷಗಳ ಮಿತಿಯಲ್ಲಿ ಇರಬೇಕು. ಸ್ನಾತಕೊತ್ತರ ಪದವೀಧರರಿಗೆ ವಿದ್ಯಾರ್ಥಿಯ ವಯಸ್ಸು 25 ಮತ್ತು ಪಿ.ಹೆಚ್.ಡಿ ಪಧವೀಧವಿದರರಿಗೆ 27 ವರ್ಷಗಳ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98,000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5%,ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ನಿಗದಿ ಮಾಡಲಾಗಿದೆ.
ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಜುಲೈ 2 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ 080-22374848, 7899899039 ಕರೆ ಮಾಡಬಹುದು. ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಮಗದ ಕಛೇರಿಗಳಲ್ಲಿ ಪೂರ್ವಾಹ್ನ10.00ರಿಂದ ಸಂಜೆ5.30ರವರೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.