LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಾಮಾಚಾರ ಮಾಡಿ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ ದರೋಡೆ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ನಲ್ಲಿ​ ಕಳ್ಳತನವಾಗಿದೆ. ಬ್ಯಾಂಕ್ ಬಾಗಲಿನ ಬೀಗ ಮುರಿದು, ಕಿಟಕಿಯ ಬಾರ್​ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ. ಬಳಿಕ, ಬ್ಯಾಂಕ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ. ಇಷ್ಟೇ ಅಲ್ಲದೇ, ಬ್ಯಾಂಕ್​ನಲ್ಲಿ ಸಿಸಿ ಕ್ಯಾಮೆರಾಗಳ ಹಾರ್ಡ್​ ಡ್ರೈವ್​ ಕೂಡ ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಈ ಚಾಲಾಕಿತನ ಪೊಲೀಸರ ನಿದ್ದೆಗೆಡಸಿದೆ.

ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು, ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬೆರಳಚ್ಚು ತಂಡ ಪರಿಶೀಲನೆ ನಡೆಸಿದೆ. ಕೆನರಾ ಬ್ಯಾಂಕ್​ ಸಿಬ್ಬಂದಿ ಲೆಕ್ಕಪತ್ರಗಳನ್ನು ತಿರುವಿ ಹಾಕುತ್ತಿದ್ದಾರೆ. ಕೆನರಾ ಬ್ಯಾಂಕ್​​ನ ಹಿರಿಯ ಅಧಿಕಾರಿಗಳು ಸಹ ಆಗಮಿಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆದರೆ, ಎಷ್ಟು ಹಣ ಮತ್ತು ಚಿನ್ನಾಭರಣ ಕಳ್ಳತನವಾಗಿದೆ ಎಂಬುವುದಕ್ಕೆ ನಿಖರವಾದ ಅಂಕಿ-ಸಂಖ್ಯೆಗಳು ಇನ್ನೂ ಬಹಿರಂಗವಾಗಿಲ್ಲ.



ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳರು ಸೈರನ್ ಮೊಳಗದಂತೆ ನೋಡಿಕೊಂಡಿದ್ದಾರೆ. ಸಿಸಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ ತೆಗೆದುಕೊಂಡು ಹೋಗಿದ್ದಾರೆ. ಇನ್ನು, ಮನಗೂಳಿ ಪಟ್ಟಣ ಪಂಚಾಯತಿಯಿಂದ ಪ್ರಮುಖ ಭಾಗಗಳಲ್ಲಿ 35 ಸಿಸಿ ಕ್ಯಾಮೆರಾಮಗಳನ್ನು ಅಳವಡಿಕೆ ಮಾಡಲಾಗಿದ್ದು, ತನಿಖಾಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿನ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳ ಪರಿಶೀಲನಾ ಕಾರ್ಯ ಕೂಡ ನಡೆದಿದೆ. ಮೂಲಗಳ ಪ್ರಕಾರ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ ಎನ್ನಲಾಗಿದೆ. ಆದರೆ, ಬ್ಯಾಂಕ್ ಅಧಿಕಾರಿಗಳು ಹಾಗೂ ಪೊಲೀಸರು ಯಾವುದೇ ಮಾಹಿತಿ ನೀಡದೆ ಇರುವುದು ಗ್ರಾಹಕರಲ್ಲಿ ಭಯ ಹುಟ್ಟಿಸಿದೆ.



ಇತ್ತೀಚೆಗೆ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಹಣ ಹಾಗೂ ಚಿನ್ನಾಭರಣಗಳನ್ನು ಬ್ಯಾಂಕ್​ನಲ್ಲಿಟ್ಟಿದ್ದೇವೆ. ಈಗ ಕೆನರಾ ಬ್ಯಾಂಕ್ ಕಳ್ಳತನವಾಗಿ ಸಮಸ್ಯೆಯಾಗಿದೆ. ನಮ್ಮ ಚಿನ್ನಾಭರಣ ಹಾಗೂ ನಗದು ಹಣಕ್ಕೆ ಬ್ಯಾಂಕ್​ನವರೇ ಹೊಣೆ. ನಮ್ಮ ಹಣ ಹಾಗೂ ಚಿನ್ನಾಭರಣಗಳನ್ನು ಬ್ಯಾಂಕ್​ನವರೇ ನಮಗೆ ವಾಪಸ್ ನೀಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುತ್ತೇವೆಂದು ಗ್ರಾಹಕರು ಎಚ್ಚರಿಕೆ ನೀಡಿದ್ದಾರೆ.



ವಿಜಯಪುರದಲ್ಲಿ 10 ವರ್ಷಗಳ ಹಿಂದೆ ಸಿದ್ದೇಶ್ವರ ಸಹಕಾರಿ ಬ್ಯಾಂಕ್​ನಲ್ಲಿ ಕಳ್ಳತನವಾಗಿತ್ತು. ಇದೀಗ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ನಲ್ಲಿ ಕಳ್ಳತನವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026