LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾತು ಮತ್ತು ಆಲೋಚನೆಗಳು ಜಗತ್ತನ್ನು ಆಳುತ್ತವೆ: ಕೆ.ಕೆ. ಮಣಿ.!

 

ಚಿತ್ರದುರ್ಗ: ಜ್ಞಾನಕ್ಕೆ ಮಿಗಿಲಾದುದು ಯಾವುದೂ ಇಲ್ಲ. ಮಾತುಗಳು ಮತ್ತು ಆಲೋಚನೆಗಳು ಜಗತ್ತನ್ನು ಆಳುತ್ತವೆ ಎಂದು ತಾಂತ್ರಿಕ ವಿಭಾಗದ ಮುಖ್ಯಸ್ಥ ಕೆ.ಕೆ.ಮಣಿ ಹೇಳಿದರು.

ಭಾರತೀಯ ಸಾರ್ವಜನಿಕ ಪ್ರಸಾರ ಸೇವೆ, ಪ್ರಸಾರ ಭಾರತಿ ಆಕಾಶವಾಣಿ ನಿಲಯದಿಂದ ಗುರುವಾರ ನಗರದ ಆಕಾಶವಾಣಿ ನಿಲಯದಲ್ಲಿ ಆಯೋಜಿಸಲಾದ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ‘ಕನ್ನಡ ರಾಜ್ಯಯೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಮಾತು ಮತ್ತು ಆಲೋಚನೆಗಳು ಉದಾತ್ತಗೊಂಡಾಗ ನಮ್ಮ ಚಿಂತನೆಯ ಗುಣಮಟ್ಟ ಕೂಡಾ ಉತ್ತಮಗೊಳ್ಳುತ್ತದೆ. ಕನ್ನಡವನ್ನು ಕಟ್ಟುವ ನೆಲೆಗಟ್ಟಿನಲ್ಲಿ ಆಕಾಶವಾಣಿಯ ನಿರೂಪಕರ ಪಾತ್ರ ಮಹತ್ವದ್ದು. ಹೆಚ್ಚು ಹೆಚ್ಚು ನಾವೀನ್ಯತೆಯೊಂದಿಗೆ ಧ್ವನಿಯ ಮೂಲಕ ಭಾವ ಸಾಧ್ಯತೆಗಳನ್ನು ಶೋತೃಗಳ ಹೃದಯಕ್ಕೆ ದಾಟಿಸುವ ಪ್ರಯತ್ನ ಮಾಡಬೇಕು ಎಂದರು.

ನಿಲಯದ ಕಾರ್ಯಕ್ರಮದ ಮುಖ್ಯಸ್ಥರಾದ ಎಸ್. ಆರ್. ಭಟ್ ಮಾತನಾಡಿ, ಕನ್ನಡದ ನೆಲ, ಜಲ ಭಾಷೆ ಉಳಿಸಿ ಬೆಳೆಸುವುದರೊಂದಿಗೆ ಮಾಹಿತಿ, ಮನೋರಂಜನೆ, ಸಾಹಿತ್ಯ, ಶಿಕ್ಷಣ, ಕಲೆ ಇವುಗಳನ್ನು ಸ್ಪರ್ಧಾತ್ಮಕವಾದ ಮಾಧ್ಯಮ ಜಗತ್ತಿನಲ್ಲಿ ಇಂದಿಗೂ ಗುಣಾತ್ಮಕ ಒಳನೋಟದೊಂದಿಗೆ ನಿತ್ಯವೂ ಪ್ರಸ್ತುತ ಪಡಿಸುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನಿಲಯದ ಪ್ರಸಾರ ವಿಭಾಗದ ಮುಖ್ಯಸ್ಥರಾದ ಡಿ.ಆರ್.ಶಿವಪ್ರಕಾಶ್ ಮಾತನಾಡಿ, ದೇಶದ ಎಲ್ಲಾ ರಾಜ್ಯಗಳಲ್ಲಿ ಆಕಾಶವಾಣಿಯೂ ವರ್ಷದ 365 ದಿನಗಳ ಕಾಲ ಆಯಾ ರಾಜ್ಯದ ಭಾಷೆ, ನಾಡು, ನುಡಿಗಾಗಿ ಸೇವೆಸಲ್ಲಿಸುತ್ತಿದೆ. ಭಾರತದ ಭಾಷೆ, ಸಂಸ್ಕೃತಿ, ನುಡಿ, ಪರಂಪರೆಯನ್ನು ಈ ನಾಡಿಗೆ ಅರ್ಥಪೂರ್ಣವಾಗಿ ಕಟ್ಟಿಕೊಡುವ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಂತ್ರಿಕ ವಿಭಾಗದ ಆನಂದಪ್ಪ, ಶಿವಮೂರ್ತಿ, ತ್ಯಾಗರಾಜ್, ದೇವದಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ