LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ: ಕೆ.ವಿ.ಪ್ರಭಾಕರ್

ಕೋಲಾರ: ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಮಾಧ್ಯಮ‌ ಅಕಾಡೆಮಿ ಆಯೋಜಿಸಿದ್ದ "ಪತ್ರಿಕೋದ್ಯಮ ಇಂದು-ಮುಂದು" ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಲ್ಲಿ ಅಧ್ಯಯನಶೀಲತೆ ಕಡಿಮೆ ಆಗುತ್ತಿದೆ. ಕೈಯಲ್ಲಿ ಲೋಗೋ ಹಿಡಿದು ಪ್ರಶ್ನೆ ಕೇಳುವ ಪತ್ರಕರ್ತರಿಗೆ ವಾಪಾಸ್ ಅದೇ ವಿಚಾರದ ಬಗ್ಗೆ ನಾವೇ ಒಂದು ಪ್ರಶ್ನೆ ಕೇಳಿದರೆ ಅವರಲ್ಲಿ ಉತ್ತರ ಇರುವುದಿಲ್ಲ. ಇದಕ್ಕೆ ಅಧ್ಯಯನಶೀಲತೆಯ ಕೊರತೆಯೇ ಕಾರಣ ಎಂದರು.

ಮತ್ತೊಂದು ಊಹಾ ಪತ್ರಿಕೋದ್ಯಮ‌ ಅತಿಯಾಗುತ್ತಿದೆ. ನಡೆಯದ ಸಂಗತಿಗಳನ್ನು ಅವರಿಗೆ ಅವರೇ ಊಹೆ ಮಾಡಿಕೊಂಡು ಬ್ರೇಕಿಂಗ್ ಸುದ್ದಿ ಕೊಡುವ ಹಾವಳಿ ಹೆಚ್ಚಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಇಂದು ಆಯೋಜಿಸಿರುವ ಪತ್ರಿಕೋದ್ಯಮ: ಇಂದು-ಮುಂದು" ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಅತ್ಯಂತ ಅರ್ಥಪೂರ್ಣ ಮತ್ತು ಅಗತ್ಯವಾದದ್ದು.

ಪತ್ರಿಕಾ ವೃತ್ತಿಗೆ, ಮಾಧ್ಯಮ ಕ್ಷೇತ್ರಕ್ಕೆ ಬಂದೊದಗಬಹುದಾದ ಸವಾಲುಗಳನ್ನು ಮೊದಲೇ ಗ್ರಹಿಸಿ ಆ ಸವಾಲುಗಳನ್ನು ಗೆಲ್ಲಲು ಅಗತ್ಯವಾದ ಬೌದ್ಧಿಕ ಕಸರತ್ತು ನಡೆಸುವುದು ಅತ್ಯಗತ್ಯ ಎಂದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಪತ್ರಿಕೋದ್ಯಮವನ್ನು ಸಮಾಜದ ಪ್ರಾಣವಾಯು ಅಂತ ಕರೆದಿದ್ದಾರೆ. ಆದರೆ ಈ ಮಾತು ಈಗ ಪತ್ರಿಕೋದ್ಯಮದಲ್ಲಿ ಉಳಿದಿದೆಯಾ ಎಂದು ನಾವೇ ಪ್ರಶ್ನಿಸಿಕೊಳ್ಳಬೇಕು ಎಂದರು.

ಇವತ್ತಿನ ಈ ಕಾರ್ಯಾಗಾರಕ್ಕೆ ಎರಡು ಕಾರಣಗಳು ಇರಬಹುದು ಎಂದು ನಾನು ಭಾವಿಸುತ್ತೇನೆ...

1) AI (ಕೃತಕ‌ ಬುದ್ದಿ ಮತ್ತೆ) ಹಾಗೂ ಇತರೆ ತಂತ್ರಜ್ಞಾನ‌ ತಂದೊಡ್ಡುವ ಸವಾಲು.

2) ತಂತ್ರಜ್ಞಾನದ ಜೊತೆಗೆ Fake News ವೇಗವೂ ಹೆಚ್ಚಾಗುತ್ತಿರುವ ಸವಾಲು.

ಇವೆರಡೂ ಸವಾಲುಗಳಿಂದ ಮಾದ್ಯಮ ಕ್ಷೇತ್ರ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಏನಿದ್ದರೂ ಇವೆರಡನ್ನೂ ಮುಖಾಮುಖಿಯಾಗಿ ನಾವು ಎದುರಿಸಲೇಬೇಕು ಮತ್ತು ಜೀರ್ಣಿಸಿಕೊಳ್ಳಲೇಬೇಕಿದೆ ಎಂದರು.

ನಮ್ಮ ಮಾಧ್ಯಮ ಕ್ಷೇತ್ರಕ್ಕೆ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಇಂತಹ ಹಲವಾರು ಸವಾಲುಗಳನ್ನು ಜೀರ್ಣಿಸಿಕೊಂಡಿರುವ ಉದಾಹರಣೆ ಕೂಡ ನಮ್ಮ‌ ಮುಂದಿದೆ. ಇದಕ್ಕೆ ಉತ್ತಮ‌ ಉದಾಹರಣೆ ಎಂದರೆ ಕೋವಿಡ್.

ಕೋವಿಡ್ ಬಂದಾಗ ಮಾಧ್ಯಮಗಳು ಅದರಲ್ಲೂ ಮುದ್ರಣ ಮಾಧ್ಯಮದ ಭವಿಷ್ಯವೇ ಮುಗಿದುಹೋಯ್ತು ಎನ್ನುವ ಆತಂಕ ಮನೆ ಮಾಡಿತ್ತು.‌

ಆದರೆ, FICCI (Federation of Indian Chambers of Commerce and Industry) ಸಂಸ್ಥೆ 2023 ರಲ್ಲಿ ಮುದ್ರಣ ಮಾಧ್ಯಮಗಳ ಸ್ಥಿತಿ ಗತಿಯ ವರದಿ ಬಿಡುಗಡೆ ಮಾಡಿದೆ. ಈ ವರದಿ ಬಹಳ ಭರವಸೆ ಮೂಡಿಸುವಂತಿದೆ.

ಕೋವಿಡ್ ಸಂದರ್ಭದಲ್ಲಿ ಅಪಾರವಾಗಿ ನೆಲಕಚ್ಚಿದ್ದ ಮುದ್ರಣ ಮಾಧ್ಯಮ 2023 ರಲ್ಲಿ ಬಹಳ ಚೇತರಿಸಿಕೊಂಡಿದೆ.

*ದೇಶದ ಮುದ್ರಣ ಮಾಧ್ಯಮದ ಆದಾಯ 4% ಹೆಚ್ಚಾಗಿ ವಾರ್ಷಿಕ 260 ಬಿಲಿಯನ್ ರೂಪಾಯಿಗೆ ತಲುಪಿದೆ. 2027ಕ್ಕೆ ಈ ಬೆಳವಣಿಗೆ ದರ ಇನ್ನೂ ಹೆಚ್ಚಾಗಿ 295.7 ಬಿಲಿಯನ್ ಗೆ ಏರಿಕೆ ಆಗಲಿದೆ ಎನ್ನುವ ಆಶಾ ಭಾವನೆ ವ್ಯಕ್ತವಾಗಿದೆ. ಇದರಲ್ಲಿ...

*ಜಾಹಿರಾತು ಆದಾಯ 4% ಹೆಚ್ಚಾಗಿದೆ

*ಪತ್ರಿಕೆಗಳ ಪ್ರಸಾರದಿಂದ ಬರುವ ಆದಾಯ 3% ಹೆಚ್ಚಾಗಿದೆ.

*ದಿನಪತ್ರಿಕೆಗಳಲ್ಲದ ಮ್ಯಾಗ್ಸೀನ್ ಗಳ ಆದಾಯ 3% ಹೆಚ್ಚಾಗಿದೆ.

*ಜಾಹಿರಾತು insertion ಗಳ ಪ್ರಮಾಣ 4% ಹೆಚ್ಚಾಗಿದೆ. ( ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರಗಳನ್ನು ಹಾಕಿ ಕಳುಹಿಸುವುದು).

*ಇಂಗ್ಲಿಷ್ ಪತ್ರಿಕೆಗಳ circulation ಆದಾಯ 10% ಹೆಚ್ಚಾಗಿದ್ದರೆ, ಕನ್ನಡ ಮತ್ತು ಇತರೆ ರಾಜ್ಯ ಭಾಷಿಕ ಪತ್ರಿಕೆಗಳ circulation ಆದಾಯ 2% ಹೆಚ್ಚಾಗಿದೆ.

*ಸರ್ಕಾರಗಳ ಜಾಹಿರಾತು ಪ್ರಮಾಣ ಕೂಡ ಹೆಚ್ಚಾಗಿದೆ.

*ಎಲ್ಲಕ್ಕಿಂತ ಮುಖ್ಯವಾಗಿ, ಜಾಹಿರಾತುದಾರರ ವಿಶ್ವಾಸಾರ್ಹತೆಯನ್ನು ಮುದ್ರಣ ಮಾಧ್ಯಮಗಳು ಉಳಿಸಿಕೊಂಡಿವೆ ಎಂದು FICCI ಹೇಳಿದೆ.

1,50000 ಜಾಹಿರಾತುದಾರರು, 185000 ಬ್ರಾಂಡ್ ಗಳು ಮುದ್ರಣ ಮಾಧ್ಯಮಗಳ ಮೇಲೆ ಅಪಾರ ಭರವಸೆ ವ್ಯಕ್ತಪಡಿಸಿವೆ

ಹೀಗಾಗಿ ಆದಾಯ, ಗಳಿಕೆಯ ಸವಾಲನ್ನು ಮುದ್ರಣ ಮಾಧ್ಯಮ ನಿರಂತರವಾಗಿ ಗೆಲ್ಲುತ್ತಲೇ ಇದೆ ಎಂದು ವಿಶ್ಲೇಷಿಸಿದರು.

ಅಚ್ಚುಮೊಳೆ ಕಾಲದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಹಲವಾರು ತಂತ್ರಜ್ಞಾನದ ಸವಾಲುಗಳನ್ನು ಮಾಧ್ಯಮ ಲೋಕ ಜೀರ್ಣಿಸಿಕೊಳ್ಳುತ್ತಲೇ ಬೆಳೆದಿದೆ ಎಂದರು.

ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಪತ್ರಿಕೋದ್ಯಮ ತಂತ್ರಜ್ಞಾನದಲ್ಲಿ ಎಷ್ಟೇ ಉನ್ನತ ಮಟ್ಟಕ್ಕೇರಿದರೂ, ಅದರ ನೈತಿಕ ಗುಣಮಟ್ಟ ಪಾತಾಳ ಸೇರದಂತೆ ಕಾಪಾಡಿಕೊಳ್ಳುವ ನೈತಿಕ ಮತ್ತು ಸಾಮಾಜಿಕ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ fact check ಆರಂಭಿಸಲಾಗಿದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು