Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣ : ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ

 

ಬೆಳಗಾವಿ
ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಮಹಾಮಾನವತವಾದಿ ಬಸವಣ್ಣನವರ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಅವರು ಜಗಜ್ಯೋತಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪನಮನ ಮಾಡಿ ಮಾತನಾಡಿದರು. ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಮಾಡಿದ ವಚನ ಚಳವಳಿ ಜಗತ್ತಿನ ಮನುಕುಲದ ಉದ್ಧಾರದ ಚಳವಳಿಗಳಲ್ಲಿ ಮಹತ್ವದ ಸ್ಥಾನವಿದೆ. ಬಸವಣ್ಣನವರು ದೀನ-ದಲಿತ-ನಿರ್ಗತಿಕರ, ಶೋಷಿತರ ಧ್ವನಿಯಾಗಿ ಅವರ ಬಾಳಿನಲ್ಲಿ ಬೆಳಕನ್ನು ತರಲು ತಮ್ಮ ಜೀವನವನ್ನು ಮುಡಿಪಿಟ್ಟರು. ಅವರೆಲ್ಲರಿಗೂ ಬದುಕಿನಲ್ಲಿ ಆಶಾಕಿರಣವನ್ನು ತುಂಬಿ ಆತ್ಮಾಭಿಮಾನದಿಂದ ಬದುಕುವಂತೆ ಮಾಡಿದರು. ಸಮಾಜದಲ್ಲಿ ಬೇರು ಬಿಟ್ಟಿರುವ ಅಸಮಾನತೆ, ಕಂದಾಚಾರಗಳ, ಅನಾಚಾರಗಳ ವಿರುದ್ಧ ಸಮರ ಸಾರಿದರು. ಜನಸಾಮಾನ್ಯರಲ್ಲಿ ಅವುಗಳ ಕುರಿತು ಅರಿವು ಮೂಡಿಸಿದರು. ಎಲ್ಲರಿಗೂ ಸಮಬಾಳು ಸಮಪಾಲು ಎಂಬ ತತ್ತ್ವವನ್ನು ಸಾರುವುದರ ಮೂಲಕ ಜಗತ್ತಿನ ಮೊದಲ ಸಮಾಜವಾದಿಯಾದರು. ಸ್ತ್ರೀಯರಿಗೆ ಸಮಾನತೆಯನ್ನು ತಂದು ಕೊಡುವುದರ ಮೂಲಕ ಸ್ತ್ರೀ ಸಮುದಾಯಕ್ಕೆ ಗೌರವ ತಂದುಕೊಟ್ಟರು. ಧರ್ಮ, ಸಾಮಾಜಿಕ, ಸಾಹಿತ್ಯ, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲಿ ಬದಲಾವಣೆಗೆ ಶ್ರೀಕಾರವನ್ನು ಬರೆದರು. ಸರ್ವಜೀವಿಗಳಲ್ಲಿಯೂ ದಯೆ ತೋರಬೇಕೆನ್ನುವ ಅವರ ತತ್ತ್ವಾದರ್ಶಗಳು, ಕಾಯಕ-ದಾಸೋಹ ಸಿದ್ಧಾಂತಗಳು ಮನುಕುಲದ ಉನ್ನತಿಗೆ ಬುನಾದಿಯಾಗಿವೆ ಎಂದರು.
ಡಾ. ಅರ್ಜುನ ಜಂಬಗಿ ನಿರೂಪಿಸಿದರು. ಡಾ. ಬಾಲಾಜಿ ಆಳಂದೆ ವಂದಿಸಿದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ