LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯಶಸ್ವಿನಿ ಯೋಜನೆ ನೋಂದಣಿ ಗೆ ಡಿಸೆಂಬರ್ 31ರವರೆಗೆ ಅವಕಾಶ.!

 

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು ಯೋಜನೆಗೆ ಅರ್ಹರಾಗಿರುವುದಿಲ್ಲ.ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯ ಸರ್ಕಾರಿ ನೌಕರರಾಗಿದ್ದರೂ ಸೌಲಭ್ಯ ಸಿಗುವುದಿಲ್ಲ. ಈಗಾಗಲೇ ಒಂದು ಯೋಜನೆ ಅಡಿ ಆರೋಗ್ಯ ಸೌಲಭ್ಯ ಪಡೆಯುತ್ತಿರುವವರು ಯಶಸ್ವಿನಿ ಅಡಿ ನೋಂದಾಯಿಸಿಕೊಳ್ಳುವಂತಿಲ್ಲ ಎಂದು ವಿವರಿಸಲಾಗಿದೆ.

ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬ 500 ರೂಗಳ ವಂತಿಗೆ ಭರಿಸಬೇಕು. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ ತಲಾ 100 ರೂಗಳ ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ 1,000 ರೂಗಳು ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ 200 ರೂಗಳು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು.

ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ ಎಂದು ಸಹಕಾರ ಇಲಾಖೆ ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!