LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ವೈದ್ಯರು ಕೊಳೆಗೇರಿಗಳಿಗೆ ತೆರಳಿ ಕೆಲಸ ಮಾಡಿ: ಅಜೀಂ ಪ್ರೇಂಜಿ ಕಿವಿಮಾತು

ಬೆಂಗಳೂರು: ಜನರಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಅದ್ದರಿಂದ ಮಹಾನಗರ ಅಥವಾ ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದರೂ ಬಿಡುವಿನ ಸಮಯದಲ್ಲಿ ಕೊಳೆಗೇರಿಗಳಿಗೆ ತೆರಳಿ, ವೈದ್ಯಕೀಯ ಸೇವೆ ಒದಗಿಸಿ' ಎಂದು ವಿಪ್ರೊ ಕಂಪನಿ, ಸಂಸ್ಥಾಪನಾಧ್ಯಕ್ಷ ಅಜೀಂ ಪ್ರೇಮ್ ಜಿ ಅವರು ಯುವ ವೈದ್ಯರಿಗೆ ಕಿವಿಮಾತು ಹೇಳಿದರು.

ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಗಳ ವಿಶ್ವವಿದ್ಯಾಲಯವು ನಿಮ್ಹಾನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 27ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು, ಘಟಿಕೋತ್ಸವ ಭಾಷಣ ಮಾಡಿದರು.

ಆರೋಗ್ಯ ಮತ್ತು ಶಿಕ್ಷಣ ಉತ್ತಮ ಸಮಾಜ ಹಾಗೂ ದೇಶದ ಅಡಿಪಾಯಗಳಾಗಿವೆ. ಈ ಕ್ಷೇತ್ರಗಳಲ್ಲಿ ಸೇವೆಯೇ ಪ್ರಧಾನ. ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಉತ್ತಮ ಆರೋಗ್ಯ ಮತ್ತು ಶಿಕ್ಷಣವನ್ನು ಪಡೆಯುವಂತಾಗಬೇಕು. ರೋಗಿಯೊಬ್ಬರು ಆಸ್ಪತ್ರೆಗೆ ಬಂದಾಗ ವೈದ್ಯರ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿರುತ್ತಾರೆ. ಈ ಸಂದರ್ಭದಲ್ಲಿ ವೈದ್ಯರಾದವರು ಅವರ ನಂಬಿಕೆ ಉಳಿಸಿ ಕೊಳ್ಳುವುದು ಮುಖ್ಯವಾಗುತ್ತದೆ. ವೈದ್ಯಕೀಯ ವ್ಯಾವಹಾರಿಕವಾಗಿ ವೃತ್ತಿಯನ್ನು ನೋಡದೆ. ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಆ ನಂಬಿಕೆ ಉಳಿಸಿಕೊಳ್ಳಲು, ಉತ್ತಮ ವೈದ್ಯರಾಗಲು ಸಾಧ್ಯ' ಎಂದು ಹೇಳಿದರು.

'ನಮ್ಮ ದೇಶವನ್ನು ಆರೋಗ್ಯಕರ ಮತ್ತು ಚೈತನ್ಯಶೀಲವಾಗಿರಿಸುವಲ್ಲಿ ವೈದ್ಯರು ಮಹತ್ವದ ಪಾತ್ರ ವಹಿಸುತ್ತಾರೆ. ದುರ್ಬಲ ಜನರಿರುವ ಪ್ರದೇಶ, ಗ್ರಾಮೀಣ ಭಾಗಗಳಲ್ಲಿ ವೈದ್ಯರ ಸೇವೆ ಅತ್ಯಗತ್ಯ. ಇಡೀ ವೃತ್ತಿ ಜೀವನವನ್ನು ಅಂತಹ ಸೇವೆಗೆ ಮೀಸಲಿಡಲು ಸಾಧ್ಯ ವಾಗದಿದ್ದರೆ, ನಿಮ್ಮ ಸಮಯದ ಒಂದು ಭಾಗವನ್ನಾದರೂ ಆ ಪ್ರದೇಶಗಳ ಜನರಿಗೆ ಮೀಸಲಿಡುವ ಮಾರ್ಗಗಳನ್ನು ಕಂಡುಕೊಳ್ಳಬೇಕು' ಎಂದರು.

ವೇಗವಾಗಿ ಬೆಳವಣಿಗೆ:


 ಚಿನ್ನದ ಪದಕಗಳನ್ನು ಪ್ರದಾನ ಮಾಡಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾತನಾಡಿ, 'ನಮ್ಮ ದೇಶದಲ್ಲಿ ವೈದ್ಯರನ್ನು ದೇವರಿಗೆ ಹೋಲಿಸಲಾಗುತ್ತದೆ. 623 ವೈದ್ಯರಾದವರು ನೈತಿಕ ಮೌಲ್ಯಗಳ ಜತೆಗೆ ಸೇವೆಯಲ್ಲಿ ಅರ್ಪಣಾ ಮನೋಭಾವ, ಕಲಿಕೆ ವೃತ್ತಿಗೌರವ ಬೆಳೆಸಿಕೊಳ್ಳಬೇಕು. ವೈದ್ಯಕೀಯ ಕ್ಷೇತ್ರವು ವೇಗವಾಗಿ ಬೆಳವಣಿಗೆ ಹೊಂದುವ ಜತೆಗೆ ಹಲವು ಬದಲಾವಣೆಗಳಿಗೆ ತೆರೆದುಕೊಳ್ಳುತ್ತಿದೆ. ಕೃತಕ ಬುದ್ಧಿಮತ್ತೆ, ಟೆಲಿ ಮೆಡಿಸಿನ್, ರೊಬೊಟಿಕ್ ತಂತ್ರಜ್ಞಾನದಿಂದ ಹಲವು ಅವಿಷ್ಕಾರಗಳನ್ನು ಕಾಣಬಹುದಾಗಿದೆ. ಆದ್ದರಿಂದ ವೈದ್ಯರಾದವರಿಗೆ ನಿರಂತರ ಕಲಿಕೆಯಿಂದ - ಕಲಿಕೆ ಮುಖ್ಯವಾಗುತ್ತದೆ. ಗ್ರಾಮೀಣ – ಪ್ರದೇಶದಲ್ಲಿ ಕಾರ್ಯನಿರ್ವಹಿಸಲು - ಯುವ ವೈದ್ಯರು ಆಸಕ್ತಿ ತೋರಬೇಕಿದೆ. ಅಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಸಿಗಲಿದೆ' ಎಂದು ಹೇಳಿದರು.

ಪ್ರತಿಯೊಬ್ಬರಿಗೂ ಸೇವೆಯೇ ಮುಖ್ಯ ಧೈಯವಾಗಿರಬೇಕು. ರೋಗಿಗಳನ್ನು ಅತ್ಯಂತ ಶ್ರದ್ದೆ ಹಾಗೂ ಹೆಚ್ಚು ಕಾಳಜಿ ವಹಿಸಿ ಆರೈಕೆ ಮಾಡಬೇಕು. ನಿಮ್ಮ ಸೇವೆಯಿಂದ ಸ್ವಸ್ಥ ಸಮಾಜ ನಿರ್ಮಾಣವಾಗಬೇಕು' ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ, 'ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪದವಿ ಪಡೆಯುವ ವಿಶ್ವವಿದ್ಯಾಲಯದ ಕುಲಪತಿ ಭಗವಾನ್., ಕುಲಸಚಿವ ಶಿವಪ್ರಸಾದ್‌ ಪಿ.ಆ‌ರ್. ಮೌಲ್ಯ ಮಾಪನ ಕುಲ ಸಚಿವ ಡಾ.ರಿಯಾಜ್ ಅಹ್ಮದ್ ಸೇರಿದಂತೆ ವಿವಿಯ ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.

93 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ


ಘಟಿಕೋತ್ಸವ ಸಮಾರಂಭದಲ್ಲಿ ವಿಜ್ಞಾನಿ, ಸೆಂಟರ್ ಫಾರ್ ಪ್ಯೂಮನ್ ಜೆನೆಟಿಕ್ಸ್ ಕೇಂದ್ರದ ಮುಖ್ಯಸ್ಥ ಹೊಂಬೇಗೌಡ ಶರತ್‌ಚಂದ್ರ, ಒಎಂಎಫ್ ಸರ್ಜನ್ ಡಾ. ಗಿರೀಶ್ ರಾವ್ ಮತ್ತು ನರರೋಗ ತಜ್ಞ ಡಾ.ಜಿ.ಟಿ. ಸುಭಾಷ್ ಅವರಿಗೆ 'ಡಾಕ್ಟ‌ರ್ ಆಫ್ ಸೈನ್ಸ್' ಗೌರವ ಪ್ರದಾನ ಮಾಡಲಾಯಿತು. ಒಟ್ಟು 93 ವಿದ್ಯಾರ್ಥಿಗಳಿಗೆ 109 ಚಿನ್ನದ ಪದಕ ವಿತರಿಸಲಾಯಿತು. ಪಿಇಎಸ್ ಫಾರ್ಮಸಿ ಕಾಲೇಜಿನ ಫಾರ್ಮಾ ಡಿ. ಕೋರ್ಸ್‌ನ ಡಾ. ಗಿರೀಶ್ ಬಿ.ಎಸ್., (6) ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಡಾ. ಗನ್ಯಾಶ್ರೀ (4), ಶಿವಮೊಗ್ಗ ಶರಾವತಿ ದಂತ ಕಾಲೇಜಿನ ಡಾ. ಪ್ರಕೃತಿ ಸಿ. ಪಾಟೀಲ (3) ಹಾಗೂ ನೈಟಿಂಗೇಲ್ ನರ್ಸಿಂಗ್ ಕಾಲೇಜಿನ ಅಲೀನಾ ಜೋಸ್ (3) ಅಧಿಕ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ